NEWS HIGHLIGHTS
ಶಿವಮೊಗ್ಗ: ನಗರದ ಮತ್ತೊಂದು ರಸ್ತೆಯಲ್ಲಿ ವಾಹನಗಳಿಗೆ ಒನ್ ವೇ (One Way) ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗದ ಇಂದಿರಾ ಗಾಂಧಿ ರಸ್ತೆಯಲ್ಲಿ ಇನ್ಮುಂದೆ ಏಕಮುಖ ಸಂಚಾರ ಇರಲಿದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.ಜಿಲ್ಲಾಧಿಕಾರಿ ಆದೇಶದಲ್ಲಿ ಏನಿದೆ?
ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಇರುವ ಇಂದಿರಾ ಗಾಂಧಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
ಒನ್ ವೇ ಯಾವುದು?: ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು ಅವಕಾಶ ಇರಲಿದೆ.

ನೋ ಎಂಟ್ರಿ: ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾರಿನಿಂದ ಹೊರಗೆಳೆದು ವೈದ್ಯನಿಗೆ ಥಳಿಸಿದ ಜನ, ಆಗಿದ್ದೇನು?