‘ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ವಿರೋಧಿಗಳಿಗೆ ಶಕ್ತಿ’

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ (Government) ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ವಿರೋಧಿಗಳಿಗೆ ಶಕ್ತಿ ಬರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.

ಪತ್ರಿಕಾ ಭವನದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶ ವಿರೋಧಿ ಚಿಂತನೆ ಮತ್ತು ಶಕ್ತಿಗಳು ಹೆಚ್ಚುತ್ತವೆ. ಇದಕ್ಕೆ ಭದ್ರಾವತಿ, ಶೃಂಗೇರಿ, ಸಾಗರ, ಮದ್ದೂರಿನಲ್ಲಿ ನಡೆದಿರುವ ಘಟನೆಗಳೆ ಸಾಕ್ಷಿ. ಈ ಬಗ್ಗೆ ಕ್ರಮ ಕೈಗೊಳ್ಳದೆ ಸುಮ್ಮನಾಗಿರುವುದು ಖಂಡನೀಯ ಎಂದರು.

ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಆದರೆ ಹಿಂದುಗಳ ರಕ್ಷಣೆಗೆ ನಿಂತ, ಅವರ ಪರವಾಗಿ ಮಾತನಾಡಿದ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ದುಷ್ಟಕೂಟಗಳ ವಿರುದ್ಧ ನಾವು ನಿಲ್ಲಬೇಕಿದೆ ಎಂದರು.

BY-Raghavendra-Press-meet-in-Shimoga-city

ಬಾನು ಮುಸ್ತಾಕ್ ಬಗ್ಗೆ ಗೌರವವಿದೆ. ಭುವನೇಶ್ವರಿ ಮತ್ತು ಅರಿಶಿನ, ಕುಂಕುಮದ ಬಗ್ಗೆ ಬೆಲೆ ಇಲ್ಲದೆ ಮಾತನಾಡುವ ಅವರು ಯೋಚನೆ ಮಾಡಬೇಕಿತ್ತು. ತಾಯಿ ಭುವನೇಶ್ವರಿ ಬಗ್ಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿರುವ ಅವರು ದಸರಾ ಉದ್ಘಾಟಿಸುವುದು ಎಷ್ಟು ಸರಿ.

  • ಬಿ.ವೈ.ರಾಘವೇಂದ್ರ, ಸಂಸದ

RED-LINE-

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್‌ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

Prashanth-Loan-Advertisement.

anti social elements during congress Government 

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment