ಶಿವಮೊಗ್ಗ ಸಿಟಿಯಲ್ಲಿ ದೀಪಾವಳಿ ಮೆರಗು ಹೆಚ್ಚಿಸಿದ ಅಂಟಿಗೆ ಪಂಟಿಗೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ ನೀಡಲಾಯಿತು. ಶಿವಮೊಗ್ಗ ‌ಶಾಖಾ ಮಠದ ನಾದನಂದನಾಥ ಸ್ವಾಮೀಜಿ ಉದ್ಘಾಟಿಸಿದರು.

ಕಾಲಭೈರವೇಶ್ವರ ದೇವಸ್ಥಾನದಿಂದ‌ ಸಂಜೆ ಹೊರಟ ತೀರ್ಥಹಳ್ಳಿಯ ಬಾಂದ್ಯಾದ 2 ತಂಡಗಳನ್ನು ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಸುಮಾರು 80ಕ್ಕೂ ಹೆಚ್ಚು ಮನೆಗಳಿಗೆ ಅಂಟಿಗೆ ಪಂಟಿಗೆ ತಂಡ ಬೆಳಗಿನ ಜಾವದವರೆಗೂ ತೆರಳಿತು.

ಗಮನ ಸೆಳೆದ ಅಂಟಿಗೆ ಪಂಟಿಗೆ ಪದ 

ಮನೆಗಳಿಗೆ ತೆರಳಿ ದೀಪ ನೀಡಿ ಅಂಟಿಗೆ ಪಂಟಿಗೆ ಪದಗಳ ಗಮನ ಸೆಳೆಯಿತು. ‘ದೀಪೋಳಿ ಎನ್ನಿರಣ್ಣಾ ..ಈ ಊರ ದೇವ್ರಿಗೆ’ , ‘ಮಣ್ಣಲ್ಲಿ ಹುಟ್ಟಿದೆ, ಮಣ್ಣಲ್ಲಿ ಬೆಳೆದೆ, ಎಣ್ಣೆಲಿ ಕಣ್ನಬಿಟ್ಟಿದೆ, ಜಗಜ್ಯೋತಿ ನಾ ಸತ್ಯದಿಂದ ಉರಿವೆ ಜಗಜ್ಯೋತಿ’ ಎನ್ನುತ್ತಾ ಶುಭಹಾರೈಸಿದರು. ಅಂಟಿಕೆ ಪಂಟಿಗೆಯ ತಂಡ ತರುವ ಜ್ಯೋತಿ ಮನೆ ಪ್ರವೇಶಿಸಿದಾಗ ಮನೆಯವರು ದೀಪಕ್ಕೆ ಎಣ್ಣೆ ಎರೆದು ಪೂಜೆ ಸಲ್ಲಿಸಿದರು. ಹೀಗೆ ದೀಪ ಬೆಳಗಿದ ಮನೆಯಲ್ಲಿ ಮುಂದಿನ ವರ್ಷದವರೆಗೆ ಯಾವುದೇ ಕಷ್ಟಗಳು ಬರುವುದಿಲ್ಲ ಎಂಬ ನಂಬಿಕೆಯಿದೆ.

211025-Antige-Pantige-in-shimoga-city.webp

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ಡಿ.ಗಣೇಶ್, ಪಿ.ಕೆ.ಸತೀಶ್, ಭೈರಾಪುರ ಶಿವಪ್ಪಗೌಡ, ನಾರಾಯಣ, ಅಮೀಶ್ ಉಪಸ್ಥಿತರಿದ್ದರು.

211025-Antige-Pantige-in-shimoga-city.webp

ಇದನ್ನೂ ಓದಿ » ವಾರಸುದಾರರು ಇಲ್ಲದ ಬ್ಯಾಂಕ್‌ ಠೇವಣಿ ಹಸ್ತಾಂತರಕ್ಕೆ ಶಿವಮೊಗ್ಗದಲ್ಲಿ ವಿಶೇಷ ಶಿಬಿರ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment