ಶಿವಮೊಗ್ಗದ ಸುಗುಣಾ ಸತೀಶ್‌ಗೆ ಅಪರ್ಣ ನಿರೂಪಣಾ ರತ್ನ ಪ್ರಶಸ್ತಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾ ವಾಚಕಿ ಹಾಗೂ ನಿರೂಪಕಿ ಸುಗುಣಾ ಸತೀಶ್ ಅವರಿಗೆ ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್ ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಸೋಮೇಶ್ವರ ನವೋದಯ, ಚಲನಚಿತ್ರ ನಟ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಅಧ್ಯಕ್ಷರಾದ ಪಿ. ಮಹೇಶ್ ಹಾಗೂ ಲೇಖಕರು, ಮನೋಪ್ರೇರಣಾ ತರಬೇತುದಾರರು ಮತ್ತು ಉತ್ಪಾದಕತೆ ತಜ್ಞರಾದ ಸಿ.ವಿ. ವೇಣು ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

award-for-anchor-suguna-satish

ಇದನ್ನೂ ಓದಿ » ‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ ರಾಘವೇಂದ್ರ ಆಕ್ರೋಶ, ಆಗಿದ್ದೇನು?

ಸುಗುಣಾ ಸತೀಶ್ ಅವರು ನಿರೂಪಣಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮತ್ತು ಅವರ ನಿರೂಪಣಾ ಕೌಶಲ್ಯವನ್ನು ಪರಿಗಣಿಸಿ, ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿ ಮತ್ತು ಸೂರ್ಯ ಫೌಂಡೇಶನ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment