ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೈಸೂರು ಪೇಪರ್ ಮಿಲ್ಸ್ಗೆ (ಎಂಪಿಎಂ) ಸರ್ಕಾರ ಲೀಸ್ಗೆ ನೀಡಿದ್ದ 60 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಶಿವಮೊಗ್ಗದ ಪ್ರಗತಿಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
ಅರಣ್ಯ ಹಿಂಪಡೆಯುವಂತೆ ಒತ್ತಾಯವೇಕೆ?
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 60 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು 40 ವರ್ಷ ಲೀಸ್ಗೆ ನೀಡಲಾಗಿದೆ. 2020ರ ಆಗಸ್ಟ್ಗೆ ಲೀಸ್ ಅವಧಿ ಮುಗಿಯಲಿದೆ. ಈ ಜಾಗದಲ್ಲಿ ಎಂಪಿಎಂ ಕಾರ್ಖಾನೆ 525 ನೆಡುತೋಪುಗಳನ್ನು ಮಾಡಿದ್ದು ಬಹುಪಾಲು ಅಕೇಶಿಯಾ, ಪೈನೂಸ್ ಎಂಬ ಗಿಡಗಳನ್ನು ಬೆಳೆದಿದೆ. ಇದು ಪಶ್ಚಿಮಘಟ್ಟದ ಸ್ವಾಭಾವಿಕ ಅರಣ್ಯಕ್ಕೆ ಮಾರಕವಾಗಿದೆ ಎಂದು ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.
ಖಾಸಗಿಯವರಿಗೆ ಲೀಸ್ ಮುಂದುವರೆಸುವ ಆತಂಕ
60 ಸಾವಿರ ಹೆಕ್ಟೇರ್ ಅರಣ್ಯವನ್ನು ಖಾಸಗಿಯವರಿಗೆ ನೀಡುವಂತಿಲ್ಲ ಎಂದು ಮೊದಲೇ ತಿಳಿಸಲಾಗಿದೆ. ಈಗ ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡಿದೆ. ಇದನ್ನು ಖಾಸಗಿಗೆ ವಹಿಸುವ ಕುರಿತು ಸರ್ಕಾರ ಆಸಕ್ತಿ ತೋರಿಸಿದೆ. ಈ ವೇಳೆ ಅ ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ಲೀಸ್ ಮುಂದುವರೆಸುವ ಸಾದ್ಯತೆ ಇದೆ. ಒಂದು ವೇಳೆ ಹೀಗಾದರೆ ಮಲೆನಾಡು ಬಯಲು ಸೀಮೆ ಆಗಲಿದೆ ಎಂದು ಒಕ್ಕೂಟದ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.
ಒಕ್ಕೂಟದ ಪ್ರಮುಖರಾದ ಕೆ.ಟಿ.ಗಂಗಾಧರ್, ಕೆ.ಪಿ.ಶ್ರೀಪಾಲ್, ಗುರುಮೂರ್ತಿ, ರಾಜೇಂದ್ರ ಕಂಬಳಗೆರೆ, ನಾಗೇಶನ್, ಮಾಲತೇಶ್ ಬೊಮ್ಮನಕಟ್ಟೆ, ಆದರ್ಶ ಹುಂಚದಕಟ್ಟೆ, ಪ್ರಸನ್ನ ಹಿತ್ಲಗದ್ದೆ, ಮಂಜುನಾಥ್ ನವುಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






