ಪರಿಶಿಷ್ಟ ಜಾತಿಗೆ ಸೇರಿದವರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

SHIMOGA NEWS, 8 OCTOBER 2024 : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ (Application) ಆಹ್ವಾನಿಸಿದೆ. ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆಸಕ್ತರು https://sevasindhu.karnataka.gov.in  ಪೋರ್ಟಲ್ ಮೂಲಕ ಅ.30 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.

ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ

Leave a Comment