ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್)ನಲ್ಲಿ ಒಂದು ವರ್ಷದ ಅಪ್ರೆಂಟಿಸ್ (apprentice) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಫಿಟ್ಟರ್, ಟರ್ನರ್, ಮಷಿನಿಸ್ಟ್ ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ(ಕೋಫಾ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್ಸಿ ಪ್ರೋಗ್ರಾಮರ್ ಕಂ ಆಪರೇಟರ್ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಎಸ್ಎಸ್ಎಲ್ಸಿ, ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯೆಂಟ್ ಕಾರ್ಡ್, ಪಾಸ್ ಪೋರ್ಟ್ ಸೈಜಿನ 4 ಫೋಟೊಗಳನ್ನು ಒಳಗೊಂಡ ಎಲ್ಲ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ, ಇಲ್ಲಿ ಜೂನ್ 4ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿ ಮತ್ತು ಅರ್ಜಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂ.08182 255293, 9380663606, 9901914601 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






