ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021
ಉಡುಪಿಯಲ್ಲಿ ನಡೆಯುವ ಸೇನಾ ನೇಮಕಾತಿಗೆ ಶಿವಮೊಗ್ಗದಲ್ಲಿ ಉಚಿತ ತರಬೇತಿ ನೀಡಲಾಗುತ್ತಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಾತ್ರ ಉಚಿತ ತರಬೇತಿ ಆಯೋಜಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಅವರು, ಮಾರ್ಚ್ 17 ರಿಂದ 22ನೇ ತಾರೀಖಿನವರೆಗೆ ಉಡುಪಿಯಲ್ಲಿ ಸೇನಾ ನೇಮಕಾತಿ ರಾಲಿ ನಡೆಯಲಿದೆ. ಅಭ್ಯರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಲು ಉಚಿತವಾಗಿ ತರಬೇತಿ ಆಯೋಜಿಸಲಾಗಿದೆ. ಫೆಬ್ರವರಿ 25 ರಿಂದ ಮಾರ್ಚ್ 12ರವರೆಗೆ ಶಿವಮೊಗ್ಗದಲ್ಲಿ ಶಿಬಿರ ನಡೆಯಲಿದೆ ಎಂದರು.
ಆನಂದಪುರದ ಮಲ್ನಾಡ್ ಸೋಲ್ಜರ್ ಕೋಚಿಂಗ್ ಸೆಂಟರ್ನ ಕಿಶೋರ್ ಭೈರಾಪುರ ಮಾತನಾಡಿ, ಕಳೆದ ಬಾರಿ ಆನಂದಪುರದ ಮುರುಘಾ ಮಠದ ಆವರಣದಲ್ಲಿ ಆಯೋಜಿಸಿದ್ದ ಉಚಿತ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ 20ಕ್ಕೂ ಹೆಚ್ಚು ಅಭ್ಯರ್ಥಿಗಳು ಯೋಧರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿಯುವ ಅದೇ ಮಾದರಿಯ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಯಾರಲ್ಲ ಪಾಲ್ಗೊಳ್ಳಬಹುದು?
ಸೇನಾ ನೇಮಕಾತಿಗೆ ಅಗತ್ಯವಿರುವ ಎಲ್ಲಾ ಬಗೆಯ ತರಬೇತಿಯನ್ನು ಈ ಶಿಬಿರದಲ್ಲಿ ನೀಡಲಾಗುತ್ತದೆ. ಶಿವಮೊಗ್ಗ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಬಿಜಾಪುರದ ಅಭ್ಯರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಉಡುಪಿ ನೇಮಕಾತಿ ರಾಲಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಾತ್ರವೆ ತರಬೇತಿಗೆ ಅವಕಾಶವಿದೆ.
ಆಸಕ್ತರು ಸುಭಾಷ್ ಚಂದ್ರ ತೇಜಸ್ವಿ 7975912094, ಕಿಶೋರ್ ಬೈರಾಪುರ 7892548122, ಬಾಬು ಶಾಬಾಜ್ 7975163415 ಸಂಪರ್ಕಿಸಬಹುದು.