ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019
ಜಂಬೂ ಸವಾರಿ ಆರಂಭಕ್ಕು ಮುನ್ನ ಆನೆ ತುಳಿದು ಕಲಾವಿದರೊಬ್ಬರ ಕಾಲಿನ ಮೂಳೆ ಮುರಿದಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಗಳವಾದ್ಯ ನುಡಿಸಲು ಭದ್ರಾವತಿಯಿಂದ ಆಗಮಿಸಿದ್ದ ತಂಡದಲ್ಲಿದ್ದ ಸತೀಶ್ ಎಂಬುವವರ ಕಾಲನ್ನು ಆನೆಯೊಂದು ತುಳಿದಿದೆ. ಸಾಗರ್ ಆನೆ ಮೇಲೆ ಅಂಬಾರಿಯನ್ನು ಇರಿಸುವ ಹೊತ್ತಿಗೆ ಎರಡು ಹೆಣ್ಣಾನೆಗಳನ್ನು ಸಾಗರ್ ಆನೆಯ ಅಕ್ಕಪಕ್ಕದಲ್ಲಿ ನಿಲ್ಲಿಸಿಕೊಳ್ಳಲಾಯಿತು. ಈ ವೇಳೆ ಹೆಣ್ಣಾನೆಗಳ ತಿರುಗುವ ರಭಸದಲ್ಲಿ ಕಲಾವಿದನ ಕಾಲು ತುಳಿದಿವೆ.
ಆನೆ ತುಳಿತದ ನೋವಿನಿಂದ ಕುಸಿದು ಕುಳಿತ ಕಲಾವಿದ ಸತೀಶ್ ಅವರಿಗೆ ಸ್ಥಳೀಯರು ಸಂತೈಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳು ಸತೀಶ್ ಅವರ ಸ್ಥಿತಿ ಕುರಿತು ಪಾಲಿಕೆ ಉಪಮೇಯರ್ ಚನ್ನಬಸಪ್ಪ ಮತ್ತು ವಿಪಕ್ಷ ನಾಯಕ ರಮೇಶ್ ಹೆಗ್ಡೆ ಅವರ ಗಮನಕ್ಕೆ ತಂದರು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





