ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.
, ele
ಇದನ್ನೂ ಓದಿ » ದೇಶದ ಟಾಪ್ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ
ಶಿವಮೊಗ್ಗ ವಲಯದಲ್ಲಿ ಕ್ರಿಕೆಟ್ ಪಂದ್ಯಗಳು ಹಾಗೂ ಟೂರ್ನಮೆಂಟ್ಗಳನ್ನು ಉತ್ತಮವಾಗಿ ಸಮನ್ವಯಗೊಳಿಸುವುದು, ಕ್ರಿಕೆಟ್ಗೆ ಸಂಬಂಧಿಸಿದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು, ಶಿಸ್ತು ಮತ್ತು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವುದು ತಮ್ಮ ಆದ್ಯತೆ ಎಂದು ಡಿ.ಎಸ್. ಅರುಣ್ ತಿಳಿಸಿದ್ದಾರೆ.
