ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021
ಆಶ್ರಯ ಯೋಜನೆ ಅಡಿ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದರ ವಂತಿಗೆ ಪಾವತಿಸದ ಫಲಾನುಭವಿಗಳು ಕೂಡಲೆ ಹಣ ಪಾವತಿಸಬೇಕಿದೆ. ಇಲ್ಲವಾದಲ್ಲಿ ಆನ್ ಲೈನ್ ಮೂಲಕ ಅರ್ಜಿ ಕರೆದು ನೂತನ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜಿ+2 ಮಾದರಿಯಲ್ಲಿ ಗೋವಿಂದಾಪುರದಲ್ಲಿ 3 ಸಾವಿರ ಮನೆಗಳು ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ 1836 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಟ್ಟು 5838 ಫಲಾನುಭವಿಗಳ ಆಯ್ಕೆ ಮಾಡಲಾಗಿದೆ ಎಂದರು.
ಗೋವಿಂದಾಪುರದ ಮನೆಗಳಿಗೆ ಆಯ್ಕೆಯಾದ ಫಲಾನುಭವಿಗಳ ಪೈಕಿ 2991 ಮಂದಿ ವಂತಿಗೆ ಹಣ ಪಾವತಿಸಿದ್ದಾರೆ. ಈ ಫಲಾನುಭವಿಗಳಿಗೆ ಜಿ+2 ಮಾದರಿ ಮನೆಗಳನ್ನು ಅಂತಿಮಗೊಳಿಸಲಾಗಿದೆ. ಗೋಪಿಶೆಟ್ಟಿಕೊಪ್ಪದ ಫಲಾನುಭವಿಗಳಲ್ಲು ಹಲವರು ವಂತಿಗೆ ಹಣ ಪಾವತಿಸಿಲ್ಲ ಎಂದು ತಿಳಿಸಿದರು.
ವಂತಿಗೆ ಹಣ ಪಾವತಿಸಲು ಜುಲೈ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದೆ. ಇಲ್ಲವಾದಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಅರ್ಜಿ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಈಶ್ವರಪ್ಪ ತಿಳಿಸಿದರು.
ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















