ಕೊಟ್ಟ ಸಾಲದ ಹಣ ಮರಳಿ ಕೇಳಿದ್ದಕ್ಕೆ ಕಾರಿನಲ್ಲಿ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 29 MAY 2023

SHIMOGA : ಕೊಟ್ಟ ಸಾಲದ ಹಣ (Money) ಮರಳಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ವಿವಿಧೆಡೆ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ. ಸೋಮಿನಕೊಪ್ಪದ ಇಮ್ರಾನ್‌ ಎಂಬುವವರ ಮೇಲೆ ಹಲ್ಲೆಯಾಗಿದ್ದು, ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗೋವಿಂದ ಎಂಬಾತನು ಸೇರಿ ನಾಲ್ವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Crime-News-General-Image

ಗೋವಿಂದ ಎಂಬಾತನಿಗೆ ಸಾಲ (Money) ನೀಡಿದ್ದ ಇಮ್ರಾನ್‌ ಹಣ ಹಿಂತಿರುಗಿಸುವಂತೆ ಕೇಳಿದ್ದರು. ಹಣ ಕೊಡುವುದಾಗಿ ಫೋನ್‌ ಮಾಡಿದ್ದ ಆತ ಶಿವಮೊಗ್ಗದ ಬಾರ್‌ ಒಂದರ ಬಳಿ ಬರುವಂತೆ ತಿಳಿಸಿದ್ದ. ಅಂತಿಯೇ ಇಮ್ರಾನ್ ಬಂದಿದ್ದು, ಗೋವಿಂದನೂ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬಂದಿದ್ದ. ಕಾರಿನಲ್ಲಿದ್ದವರು ಬಲವಂತವಾಗಿ ಇಮ್ರಾನ್‌ನನ್ನು ಹತ್ತಿಸಿಕೊಂಡು ಹೊಳೆಬೆನವಳ್ಳಿ ಕ್ರಾಸ್‌ವರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಇಮ್ರಾನ್‌ ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಬೈಪಾಸ್‌ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌ ಅಪಘಾತ, ತಪ್ಪಿದ ಭಾರಿ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ರಾತ್ರಿ 10.30ರ ಹೊತ್ತಿಗೆ ಇಮ್ರಾನ್‌ ಸಹೋದರನಿಗೆ ಕರೆ ಮಾಡಿ ಇಮ್ರಾನ್‌ನನ್ನು ಕರೆದೊಯ್ಯುವಂತೆ ಆರೋಪಿಗಳು ತಿಳಿಸಿದ್ದಾರೆ. ಬಿ.ಹೆಚ್‌.ರಸ್ತೆಯ ಬಾರ್‌ ಬಳಿ ಇಮ್ರಾನ್‌ನನ್ನು ಬಿಟ್ಟಿದ್ದಾರೆ. ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಇಮ್ರಾನ್‌, ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment