ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA CRIME| 27 ಏಪ್ರಿಲ್ 2022
ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಹೊನ್ನಾಳಿ ಸೇತುವೆ ಮೇಲೆ ಯುವಕನೊಬ್ಬನ ಕತ್ತು ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಲಾಗಿದೆ.
ರಾಗಿಗುಡ್ಡ ನಿವಾಸಿ ಪವನ್ (20) ಎಂಬಾತನ ಮೇಲೆ ಹಲ್ಲೆಮಾಡಿ, ಕತ್ತು ಹಿಸುಕಿ ಕೊಲೆಗೆ ಯತ್ನಿಸಲಾಗಿದೆ. ಹೋಂಡಾ ಆಕ್ಟೀವಾ ಬೈಕಿನಲ್ಲಿ ಬಂದ ಮೂವರು ಕೃತ್ಯ ಎಸಗಿದ್ದಾರೆ. ಆದರೆ ಘಟನೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ.
ಏನಿದು ಪ್ರಕರಣ?
‘ಸಿಟಿ ಕ್ಲಬ್’ನಲ್ಲಿ ಕೆಲಸ ಮುಗಿಸಿ ಪವನ್ ರಾತ್ರಿ ನಡೆದುಕೊಂಡು ಹೊನ್ನಾಳಿ ಸೇತುವೆ ಮೂಲಕ ಮನೆಗೆ ತೆರಳುತ್ತಿದ್ದಾಗ ಹೋಂಡಾ ಆಕ್ಟೀವಾದಲ್ಲಿ ಬಂದ ಮೂವರು ಅಡ್ಡಗಟ್ಟಿದ್ದಾರೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ನಡುರಾತ್ರಿ ಹೊನ್ನಾಳಿ ಸೇತುವೆ ಮೇಲೆ ಪವನ್’ನನ್ನು ಅಡ್ಡಗಟ್ಟಿದ ಮೂವರು ‘ಕಹಾ ಜಾ ರಹ ಹೈ’ ಎಂದು ಪ್ರಶ್ನಿಸಿದ್ದಾರೆ. ಮೂವರ ಪೈಕಿ ಒಬ್ಬಾತ ಇವತ್ತು ನಿನ್ನನ್ನು ಬಿಡುವುದಿಲ್ಲ ಎಂದು ಬೈಕಿನಿಂದ ಕೆಳಗಿಳಿದವನೆ ಮೂಗಿಗೆ ಪಂಚ್ ಕೊಟ್ಟಿದ್ದಾನೆ. ರಕ್ತ ಸುರಿಯುತ್ತಿದ್ದಂತೆ ಕತ್ತು ಹಿಸುಕಿ ಪವನ್ ಹತ್ಯೆ ಮಾಡಲು ಯತ್ನಿಸಿದ್ದಾರೆ.
ಪವನ್ ಜೋರಾಗಿ ಕೂಗಿಕೊಂಡಿದ್ದರಿಂದ ಸಮೀಪದಲ್ಲಿ ಹೋಗುತ್ತಿದ್ದ ಬೈಕ್ ಸವಾರರು ಬಂದು ಜಗಳ ಬಿಡಿಸಿದ್ದಾರೆ. ಗಾಯಗೊಂಡಿದ್ದ ಪವನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ದುಷ್ಕರ್ಮಿಗಳು 20 ರಿಂದ 30 ವರ್ಷ ವಯಸ್ಸಿನವರು ಎಂದು ದೂರಿನಲ್ಲಿ ತಿಳಿಸಲಾಗಿದೆ. ‘ಆರೋಪಿಗಳ ಪತ್ತೆಗೆ ಕೋಟೆ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಟಯರ್ ಸ್ಪೋಟ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















