| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ನಾನು ಬಿಬಿಎಂ ಓದುವಾಗ ಶಿವಮೊಗ್ಗಕ್ಕೆ ಭವಿಷ್ಯ ಇಲ್ಲ ಎನ್ನುತ್ತಿದ್ದರು. ಆದರೆ ಇವತ್ತು ನಮ್ಮ ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜ್, ಕೃಷಿ ವಿಶ್ವವಿದ್ಯಾಲಯ, ಇರುವಕ್ಕಿಯಲ್ಲಿ ಸಾವಿರ ಎಕರೆ ಕ್ಯಾಂಪಸ್ ಹೊಂದಿರುವ ಶಿವಪ್ಪನಾಯಕ ಯೂನಿವರ್ಸಿಟಿಯನ್ನು ನಿರ್ಮಾಣ ಮಾಡಿ ಜಿಲ್ಲೆಯ್ನನು ಎಜುಕೇಶನ್ ಹಬ್ ಆಗಿ ಪರಿವರ್ತನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಭಾರತ ಸರ್ಕಾರದ ಅಟಲ್ ಇನ್ನೋವೆಷನ್ ಮಿಷನ್ ಆಯೋಗದಿಂದ ನಿರ್ಮಾಣವಾಗಿರುವ ಅಟಲ್ ಥಿಂಕರಿಂಗ್ ಲ್ಯಾಬನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಅವರು ಮಾತನಾಡಿದರು. ಶಿವಮೊಗ್ಗವನ್ನು ಎಜುಕೇಷನ್ ಹಬ್ ಮಾಡುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕನಸು ನನಸಾಗಿದೆ ಎಂದರು.
ಎರಡು ವರ್ಷದಲ್ಲಿ ಚಿತ್ರಣ ಬದಲು
ಸಮಯ ಅತ್ಯಂತ ಮುಖ್ಯ ಈ ಕಾರಣಕ್ಕೆ ಶಿವಮೊಗ್ಗದಲ್ಲಿ 3500 ಮೀಟರ್ ರನ್ ವೇ ಹೊಂದಿರುವ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಇನ್ನೆರಡು ವರ್ಷದಲ್ಲಿ ಶಿವಮೊಗ್ಗದ ಚಿತ್ರಣ ಬದಲಾಗಲಿದೆ ಎಂದು ಸಂಸದರಾದ ಬಿವೈ ರಾಘವೇಂದ್ರ ಅವರು ತಿಳಿಸಿದರು.

ನೂತನ ಶಿಕ್ಷಣ ನೀತಿ ಕರ್ನಾಟಕದಲ್ಲಿ ಜಾರಿಯಾಗುತ್ತಿದೆ. ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಜೊತೆಗೆ ಕೌಶಲ್ಯ ವೃದ್ಧಿಸುವ ಕೆಲಸ ಆಗುತ್ತದೆ ಎಂದರು.
ಇದಕ್ಕೂ ಮೊದಲು ಅಟಲ್ ಥಿಂಕರಿಂಗ್ ಲ್ಯಾಬ್’ನಲ್ಲಿ ವಿದ್ಯಾರ್ಥಿಗಳು ಮಾಡಿದ ವಿಜ್ಞಾನದ ಪ್ರಯೋಗಗಳ ಮಾದರಿಯನ್ನು ಸಂಸದ ರಾಘವೇಂದ್ರ ವೀಕ್ಷಿಸಿ, ಮಾಹಿತಿ ಪಡೆದುಕೊಂಡರು.
ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್.ವಿಶ್ವನಾಥ್, ಪ್ರಮುಖರಾದ ಅಶ್ವತ್ಥ ನಾರಾಯಣ, ಡಿ. ಎಸ್ ಅರುಣ್, ಎಂ.ಎನ್.ರಮೇಶ್, ಬಸವರಾಜಪ್ಪ, ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()