ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 DECEMBER 2024
ಶಿವಮೊಗ್ಗದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟ
ಶಿವಮೊಗ್ಗ : ದೇಶಿಯ ವಿದ್ಯಾ ಶಾಲಾ ಸಮಿತಿ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಸಂಯುಕ್ತಾಶ್ರಯದಲ್ಲಿ ಡಿ.4ರಿಂದ ಡಿ.6ರವರೆಗೆ ಮೂರು ದಿನಗಳ ಕಾಲ 37ನೇ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಅಥ್ಲೆಟಿಕ್ (Athletic) ಕ್ರೀಡಾ ಕೂಟ ಆಯೋಜಿಸಲಾಗಿದೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ಅಥ್ಲೆಟಿಕ್ಸ್ನಲ್ಲಿ ಕುವೆಂಪು ವಿವಿ ವ್ಯಾಪ್ತಿಯ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಟ್ಟು 15 ಕಾಲೇಜುಗಳ ಸುಮಾರು 712 ಕ್ರೀಡಾಕೂಟಗಳು ಭಾಗವಹಿಸುತ್ತಿದ್ದಾರೆ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ತಿಳಿಸಿದರು.
ಗರ್ಭ ಧರಿಸಿದ ತಾಯಂದಿರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಆಗ ಹುಟ್ಟಿನಿಂದ ಸಂಭವಿಸಬಹುದಾದ ವಿಕಲಾಂಗತೆಯನ್ನು ತಡೆಯಬಹುದ ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ ಜಿಲ್ಲೆಯಲ್ಲಿ 21,694 ವಿಶೇಷ ಚೇತನರಿದ್ದಾರೆ. ಅವರಿಗೆ ತ್ರಿಚಕ್ರ ವಾಹನ ಸೇರಿ ವಿವಿಧ ಸೌಲಭ್ಯ ಒದಗಿಸಲಾಗುತ್ತಿದೆ. ಬಿ.ಹೆಚ್.ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಶಿವಮೊಗ್ಗದಲ್ಲಿ ವಿಕಲಚೇತನರ ದಿನಾಚರಣೆ
ಶಿವಮೊಗ್ಗ : ಜಿಲ್ಲಾಡಳಿತದ ವತಿಯಿಂದ ಡಾ. ಅಂಬೇಡ್ಕರ್ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಧಾನಪ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಉದ್ಘಾಟಿಸಿದರು.![]()

![]()
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್
ಚಾಲಕರಿಗೆ ಉಚಿತವಾಗಿ ಲೇಬರ್ ಕಾರ್ಡ್

ಶಿವಮೊಗ್ಗ : ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಚಾಲಕರ ಕಾರ್ಮಿಕರ ಘಟಕದ ವತಿಯಿಂದ ಚಾಲಕರಿಗೆ ಉಚಿತವಾಗಿ ಚಾಲಕರ ಲೇಬರ್ ಕಾರ್ಡ್ ವಿತರಿಸಲಾಗುತ್ತದೆ. ಡಿ.5 ಮತ್ತು ಡಿ.6ರಂದು ಬೆಳಿಗ್ಗೆ 10.30ರಿಂದ ಸಂಜೆ 6ರವರೆಗೆ ದುರ್ಗಿಗುಡಿ 2ನೇ ತಿರುವಿನಲ್ಲಿರುವ ಕಚೇರಿಯಲ್ಲಿ ಕಾರ್ಡ್ ವಿತರಿಸಲಾಗುತ್ತದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಸತೀಶ್.ಹೆಚ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















