SHIVAMOGGA LIVE NEWS | 10 FEBRURARY 2023
SHIMOGA : ನಗರದ ATNC COLLEGE ವಿದ್ಯಾರ್ಥಿಗೆ ಮುಖ್ಯಮಂತ್ರಿ ಬಂಗಾರದ ಪದಕ ಲಭಿಸಿದೆ. NCC 20 ಕರ್ನಾಟಕ ಬೆಟಾಲಿಯನ್ ಬೆಸ್ಟ್ ಕೆಡೆಟ್ ವಿಭಾಗದಲ್ಲಿ ಕಾಲೇಜಿನ ಎಸ್.ಕೆ.ದೀಕ್ಷಿತ್ ಅವರಿಗೆ ಬಂಗಾರದ ಪದಕ ಲಭಿಸಿದೆ.
ATNC COLLEGE ತೃತೀಯ ಬಿ.ಕಾಂ ವಿದ್ಯಾರ್ಥಿ ಎಸ್.ಕೆ.ದೀಕ್ಷಿತ್ ಅವರು ಫೆ.7ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ಸಮಾರಂಭದಲ್ಲಿ ಪದವಿ ಸ್ವೀಕರಿಸಿದ್ದಾರೆ. ಆಗಸ್ಟ್ 15ರಂದು ಏಕ್ ಭಾರತ್ ಶ್ರೇಷ್ಠ ಭಾರತ್ ಪಥ ಸಂಚಲನದಲ್ಲಿ ಪಾಲ್ಗೊಂಡು, ಪ್ರಧಾನ ಮಂತ್ರಿ ಔತಣಕೂಟದಲ್ಲಿಯು ಭಾಗವಹಿಸಿದ್ದರು.
![]() |
ಇದನ್ನೂ ಓದಿ – ಹೈಟೆಕ್ ಬೈಕಿನಲ್ಲಿ ದೇಶ ಸಂಚಾರ, ಶಿವಮೊಗ್ಗದಿಂದ ರೈಡ್ ಆರಂಭ, ಅಲ್ಲಲ್ಲಿ ಚಿಟಿಕೆ ಮಣ್ಣು ಸಂಗ್ರಹ, ಹೇಗಿದೆ ಬೈಕ್? ಏನಿದು ರೈಡ್?
ಎಸ್.ಕೆ.ದೀಕ್ಷಿತ್ ಅವರ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು ಮತ್ತು ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200