ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ತಡರಾತ್ರಿ ಕ್ಷುಲಕ ವಿಚಾರಕ್ಕೆ ಆಟೋ ಚಾಲಕನ (Driver) ಮೇಲೆ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಲ್ಲಿನಿಂದ ಜಜ್ಜಿ ಆಟೊ ಗಾಜು ಒಡೆದಿದ್ದಾರೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಬದಿ ಗೇಟಿನ ಬಳಿ ಪ್ರಯಾಣಿಕರಿಗಾಗಿ ಕಾದು ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು, ಬೀಡಿ ಕೇಳಿದ್ದರು. ಬೀಡಿ ಇಲ್ಲ ಎಂದ ತಕ್ಷಣ ಜಗಳ ಮಾಡಿ ಆಟೋ ಚಾಲಕ ಅನ್ವರ್ ಬಾಷಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಟೋ ಗಾಜು ಒಡೆದಿದ್ದಾರೆ. ಇನ್ನೊಮ್ಮೆ ಈ ನಿಲ್ದಾಣದಲ್ಲಿ ಕಾಣಿಸಿಕೊಳ್ಳದಂತೆ ಜೀವ ಬೆದರಿಕೆ ಒಡ್ಡಿದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಆಟೋ ಚಾಲಕ ಅನ್ವರ್ ಬಾಷಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನೂತನ KSRTC ನಗರ ಸಾರಿಗೆ ಬಸ್ಗೆ ಚಾಲನೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200