ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 ಮಾರ್ಚ್ 2022
ಕಂಡಕ್ಟರ್ ಒಬ್ಬರ ಜೊತೆ ಸಿಟಿ ಬಸ್ಸಿನಲ್ಲಿ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಸ್ಸಿನಲ್ಲಿದ್ದ ಲೀವರ್’ನಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿದ್ದು. ಜಗಳ ಬಿಡಿಸಲು ಬಂದ ಡ್ರೈವರ್ ಮೇಲೂ ಹಲ್ಲೆಯಾಗಿದೆ.
ಕಂಡಕ್ಟರ್ ಈರಣ್ಣ, ಡ್ರೈವರ್ ಖಲೀಲ್ ಗಾಯಗೊಂಡಿದ್ದಾರೆ. ವಿನೋಬನಗರದ 100 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ವಿನೋಬನಗರ 100 ಅಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಸಿಟಿ ಬಸ್ ಅಡ್ಡಗಟ್ಟಿ ನಾಲ್ವರು ಬಸ್ ಹತ್ತಿದ್ದಾರೆ. ಏಕಾಏಕಿ ಕಂಡಕ್ಟರ್ ಈರಣ್ಣ ಜೊತೆಗೆ ಜಗಳ ಆರಂಭಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಲೀವರ್’ನಿಂದ ಹಲ್ಲೆ ನಡೆಸಿದ್ದಾರೆ. ಕೂಡಲೆ ಬಸ್ ನಿಲ್ಲಿಸಿದ ಚಾಲಕ ಖಲೀಲ್ ಅವರು ಜಗಳ ಬಿಡಿಸಲು ಬಂದಿದ್ದಾರೆ. ಚಾಲಕನ ಮೇಲೂ ಹಲ್ಲೆಯಾಗಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರೆ ಜಗಳ ಬಿಡಿಸಿ ಕಂಡಕ್ಟರ್, ಡ್ರೈವರ್ ಇಬ್ಬರಿಗು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನೆ ಸಂಬಂಧ ನಾಗರಾಜ, ರಾಕೇಶ, ರಾಮು, ಪ್ರಶಾಂತ ಎಂಬುವವರ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






