ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021
ಬಾರ್ ಒಂದರಲ್ಲಿ, ವ್ಯಕ್ತಿಯೊಬ್ಬನ ತಲೆ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಲಾಗಿದೆ. ಗಾಯಗೊಂಡಿದ್ದ ವ್ಯಕ್ತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಗಾರ್ಡನ್ ಏರಿಯಾದ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಘಟನೆ ಸಂಭವಿಸಿದೆ. ಯೋಗೇಶ್ (48) ಎಂಬುವವರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಶಾಹಿದ್ ಖಾನ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೆ ಕಾರಣವೇನು?
ಬಾರ್’ನಲ್ಲಿ ಯೋಗೇಶ್ ಅವರು ಕುಳಿತಿದ್ದ ಪಕ್ಕದ ಟೇಬಲ್’ನಲ್ಲಿ ಶಾಹಿದ್ ಖಾನ್ ಎಂಬಾತ ಕುಳಿತಿದ್ದ. ಏಕಾಏಕಿ ರೊಚ್ಚಿಗೆದ್ದ ಶಾಹಿದ್ ಖಾನ್, ಯೋಗೇಶ್ ಕಡೆ ತಿರುಗಿ ‘ಏನೋ ಗುರಾಯಿಸುತ್ತೀಯ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿಯರ್ ಬಾಟಲಿಯನ್ನು ತಲೆಗೆ ಹೊಡೆದಿದ್ದಾನೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















