ಶಿವಮೊಗ್ಗ LIVE
SHIVAMOGGA LIVE NEWS | 26 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಒಬ್ಬಾತನಿಗೆ ಚಾಕುವಿನಿಂದ ತಿವಿಯಲಾಗಿದೆ. ಗಾಯಗೊಂಡಿದ್ದ ಯುಕವನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಟ್ಯಾಂಕ್ ಮೊಹಲ್ಲಾ ರಂಗನಾಥ (21) ಚಾಕು ಇರಿತಕ್ಕೆ ಒಳಗಾದವನು. ಸುದೀಪ್ (21) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ.
ಗಲಾಟೆಗೆ ಕಾರಣವೇನು?
ಶುಕ್ರವಾರ ರಾತ್ರಿ ಟ್ಯಾಂಕ್ ಮೊಹಲ್ಲಾದ ಸರ್ಕಾರಿ ಆಸ್ಪತ್ರೆ ಸಮೀಪ ಶಿವದರ್ಶನ್ ನಡೆದು ಹೋಗುತ್ತಿದ್ದಾಗ ನಾಲ್ವರು ಯುವಕರು ಅಡ್ಡಗಟ್ಟಿದ್ದಾರೆ. ಸುದೀಪ್ ಎಂಬಾತನ ಅಕ್ಕನ ಮಗಳು ಇದ್ದ ಫ್ಲೆಕ್ಸ್ ಹರಿದಿದ್ದೇಕೆ ಎಂದು ಶಿವದರ್ಶನ್’ಗೆ ಪ್ರಶ್ನೆ ಮಾಡಿ, ಹಲ್ಲೆ ಮಾಡಲು ಆರಂಭಿಸಿದ್ದಾರೆ.
ಜಗಳ ಬಿಡಿಸಲು ಹೋದ ರಂಗನಾಥ್ ಅವರಿಗೆ ಸುದೀಪ್ ಚಾಕುವಿನಿಂದ ತಿವಿದಿದ್ದಾನೆ. ಭುಜದ ಕೆಳ ಭಾಗದಲ್ಲಿ ಚಾಕು ತಿವಿತದಿಂದ ಗಾಯವಾಗಿದ್ದು, ರಂಗನಾಥ ಜೋರಾಗಿ ಕೂಗಿಕೊಂಡಿದ್ದಾನೆ. ಕೂಡಲೆ ಜನ ಸೇರಿದ್ದು, ರಂಗನಾಥ ಮತ್ತು ಶಿವದರ್ಶನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಗಲಾಟೆ ಸಂದರ್ಭ ರಂಗನಾಥನ ಕೊರಳಲ್ಲಿ ಇದ್ದ ಬೆಳ್ಳಿ ಸರ, ಮೊಬೈಲ್ ನಾಪತ್ತೆಯಾಗಿದೆ. ಘಟನೆ ಸಂಬಂಧ ಟ್ಯಾಂಕ್ ಮೊಹಲ್ಲಾದ ಸುದೀಪ್, ಶರತ್, ಆಕಾಶ್, ರಾಹೀಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






