ಶಿವಮೊಗ್ಗ: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಇಬ್ಬರು ಯುವಕರ ಮೇಲೆ ಹಲ್ಲೆಯಾಗಿದೆ (Attack). ಗಾಯಾಳುಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಕೊಂಡಿದ್ದಾರೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಘಟನೆ ನಡೆದಿದೆ.
ಆರ್ಸಿಬಿ ಪಂದ್ಯ ಗೆಲುತ್ತಿದ್ದಂತೆ ಹೊಸಮನೆ ಬಡಾವಣೆಯಲ್ಲಿ ರಾತ್ರಿ ಯುವಕರು ಡೊಳ್ಳು ಹೊಡೆಸಿ ಡಾನ್ಸ್ ಮಾಡುತ್ತಿದ್ದರು. ಪಕ್ಕದಲ್ಲಿ ನಿಂತು ಇದನ್ನು ವೀಕ್ಷಿಸುತ್ತಿದ್ದ ಗಣೇಶ, ಅವರ ಸಹೋದರ ಪ್ರಸನ್ನ ಮತ್ತು ಸ್ನೇಹಿತ ಶಿವು ಮೇಲೆ ಹಲ್ಲೆಯಾಗಿದೆ.
ನೃತ್ಯ ಮಾಡುತ್ತಿದ್ದರ ಪೈಕಿ ಒಬ್ಬಾತ ಗಣೇಶ್ ತಲೆಗೆ ಹೊಡೆದಿದ್ದಾನೆ. ಸಹೋದರ ಪ್ರಸನ್ನನ ಕಿವಿ ಭಾಗಕ್ಕೆ ಹೊಡೆಯಲಾಗಿದೆ. ಸ್ನೇಹಿತ ಶಿವುಗೆ ಕೆನ್ನೆಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಗಣೇಶ್ ಮತ್ತು ಪ್ರಸನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 6 ಜೂನ್ 2025 | ಮುಂದುವರೆದ ಥಂಡಿ, ಇವತ್ತು ಎಷ್ಟಿರುತ್ತೆ ತಾಪಮಾನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200