ಆಟೋದಲ್ಲಿ ಸಿಕ್ಕ ಮೊಬೈಲ್ ಆಟೋ ಚಾಲಕನಿಗೆ ಮಾರಲು ಹೋಗಿ ಸಿಕ್ಕಿಬಿದ್ದ ಪ್ರಯಾಣಿಕ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022

ಪ್ರಯಾಣಿಕನೊಬ್ಬ ಆಟೋದಲ್ಲಿ ಸಿಕ್ಕ ಮೊಬೈಲನ್ನು ಆಟೋ ಚಾಲಕನಿಗೆ ಮಾರಾಟ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಮೊಬೈಲ್ ಕಳೆದುಕೊಂಡಿದ್ದ ವೈದ್ಯರಿಗೆ ಆ ಮೊಬೈಲ್ ತಲುಪಿಸಲಾಗಿದೆ. ಆಟೋ ಚಾಲಕನ ಸಮಯ ಪ್ರಜ್ಞೆ ಮತ್ತು ಪ್ರಮಾಣಿಕತೆಯಿಂದಾಗಿ ಮೊಬೈಲ್ ಫೋನ್ ವಾರಸುದಾರರ ಕೈ ಸೇರಿದೆ.

ಗಡಿಬಿಡಿಯಲ್ಲಿ ಮೊಬೈಲ್ ಬಿಟ್ಟರು

ಸ್ವಾಮಿ ಎಂಬುವವರ ಆಟೋದಲ್ಲಿ ವೈದ್ಯರೊಬ್ಬರು ಖಾಸಗಿ ಬಸ್ ನಿಲ್ದಾಣದಿಂದ ಗಾಡಿಕೊಪ್ಪದ ಶರಾವತಿ ಡೆಂಟಲ್ ಕಾಲೇಜಿಗೆ ತೆರಳಿದ್ದಾರೆ. ಇಳಿಯುವಾಗ ಅವಸರದಲ್ಲಿ ಆಟೋದಲ್ಲೇ ತಮ್ಮ ಮೊಬೈಲ್ ಫೋನ್ ಬೀಳಿಸಿಕೊಂಡಿದ್ದರು.

ಆಟೋ ಚಾಲಕ ಸ್ವಾಮಿ ಅವರು ಇದನ್ನು ಗಮನಿಸದೆ ಬಸ್ ನಿಲ್ದಾಣದ ಕಡೆಗೆ ಮರಳುತ್ತಿದ್ದರು. ಆಗ ಮತ್ತೊಬ್ಬ ಪ್ರಯಾಣಿಕ ಆಟೋ ಹತ್ತಿದ್ದಾನೆ. ಆಟೋದಲ್ಲಿ ಬಿದ್ದಿದ್ದ ಮೊಬೈಲ್ ಫೋನನ್ನು ಎತ್ತಿಕೊಂಡಿದ್ದಾನೆ. ಅಲ್ಲದೆ ಆಟೋ ಚಾಲಕ ಸ್ವಾಮಿ ಅವರಿಗೆ ಅದನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ.

ಆಟೋ ಚಾಲಕನ ಸಮಯ ಪ್ರಜ್ಞೆ

ಇನ್ನು, ಆಟೋ ಚಾಲಕ ಸ್ವಾಮಿ ಅವರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಮೊಬೈಲ್ ಲಾಕ್ ಓಪನ್ ಮಾಡುವಂತೆ ಪ್ರಯಾಣಿಕನಿಗೆ ತಿಳಿಸಿದ್ದಾರೆ. ಆತ ಮೊಬೈಲ್ ಲಾಕ್ ಓಪನ್ ಮಾಡಲು ವಿಫಲವಾಗಿದ್ದಾನೆ. ಆಟೋವನ್ನು ಪೊಲೀಸ್ ಠಾಣೆಗೆ ಕೊಂಡೊಯ್ಯುವುದಾಗಿ ತಿಳಿಸಿದ್ದರಿಂದ ಹೆದರಿದ ಪ್ರಯಾಣಿಕ, ಮೊಬೈಲ್ ನಿಮ್ಮ ಆಟೋದಲ್ಲೇ ಸಿಕ್ಕಿದ್ದು ಎಂದು ಒಪ್ಪಿಕೊಂಡಿದ್ದಾನೆ. ವಿಚಾರ ತಿಳಿಯುತ್ತಿದ್ದ ಹಾಗೆ ಚಾಲಕ ಸ್ವಾಮಿ ಅವರು ಕನ್ನಡಿಗರ ಆಟೋ ಚಾಲಕ ಸಂಘದ ಅಧ್ಯಕ್ಷ ಜಯಣ್ಣ ಅವರಿಗೆ ವಿಚಾರ ತಿಳಿಸಿದ್ದಾರೆ.

ಪೊಲೀಸ್ ಠಾಣೆಗೆ ಪ್ರಕರಣ

ಆಟೋದಲ್ಲಿ ಮೊಬೈಲ್ ಸಿಕ್ಕ ವಿಚಾರವನ್ನು ಆಟೋ ಚಾಲಕರು ದೊಡ್ಡಪೇಟೆ ಠಾಣೆ ಪೊಲೀಸರಿಗೆ ತಿಳಿಸಿದ್ದಾರೆ. ಅಷ್ಟು ಹೊತ್ತಿಗೆ ಮೊಬೈಲ್ ಕಳೆದುಕೊಂಡಿದ್ದ ವೈದ್ಯರು ಬಸ್ ನಿಲ್ದಾಣದ ಬಳಿ ಆಟೋಗಾಗಿ ಹುಡುಕುತ್ತಿದ್ದರು. ಚಾಲಕ ಸ್ವಾಮಿ ಅವರು ವೈದ್ಯರನ್ನು ಗುರುತಿಸಿ, ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ಮೊಬೈಲ್ ವಾಪಸ್ ನೀಡಿದ್ದಾರೆ.

ಆಟೋ ಚಾಲಕ ಸ್ವಾಮಿ ಅವರ ಸಮಯ ಪ್ರಜ್ಞೆ ಮತ್ತು ಪ್ರಮಾಣಿಕತೆಯಿಂದಾಗಿ ವೈದ್ಯರಿಗೆ ತಮ್ಮ ಮೊಬೈಲ್ ಸಿಕ್ಕಂತಾಗಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಕ್ಲಬ್ ಮೇಲೆ ದಾಳಿ, ಕಾರ್ಪೊರೇಟರ್ ಪತಿ, ಮಾಜಿ ಕಾರ್ಪೊರೇಟರ್ ಸೇರಿ ಹಲವರು ವಶಕ್ಕೆ

Nanjappa Hospital Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2022

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment