ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸೆ.10ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (ಡಿಸಿಸಿ ಬ್ಯಾಂಕ್) ವಾರ್ಷಿಕ ಮಹಾಸಭೆ ನಡೆಯಲಿದ್ದು, ಅಂದು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ (Award) ನೀಡಲಾಗುತ್ತದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ತಿಳಿಸಿದರು.
ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡ, ಆರು ಉತ್ತಮ ಸಹಕಾರ ಸಂಘಗಳಿಗೆ ₹10,000 ಪ್ರೋತ್ಸಾಹ ಧನ ಮತ್ತು ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಯಾವೆಲ್ಲ ಸಂಘಕ್ಕೆ ಪ್ರಶಸ್ತಿ ಲಭಿಸಿದೆ?
ಗಾಜನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ. ತಮ್ಮಡಿಹಳ್ಳಿ, ಭದ್ರಾವತಿಯ ತಳ್ಳಿಕಟ್ಟೆ, ತೀರ್ಥಹಳ್ಳಿಯ ಮಾಗರವಳ್ಳಿ, ಮಂಡಗದ್ದೆ, ಸೊರಬದ ಚಂದ್ರಗುತ್ತಿ, ಶಿಕಾರಿಪುರದ ಮಲ್ಲೇನಹಳ್ಳಿ, ಸಾಗರ ತಾಲೂಕಿನ ಆವಿನಹಳ್ಳಿ, ಖಂಡಿಕಾ, ಹೊಸನಗರದ ಪುರಪ್ಪೆಮನೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪತ್ತಿನ ಸಹಕಾರ ಸಂಘಗಳು: ಶಿವಮೊಗ್ಗ ಉಪ ವಿಭಾಗದ ಅನುದಾನಿಕ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ, ಸಾಗರ ಉಪ ವಿಭಾಗದಲ್ಲಿ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್.
ಮಾರಾಟ ಸಹಕಾರ ಸಂಘಗಳು: ಶಿವಮೊಗ್ಗ ಉಪ ವಿಭಾಗದ ಶಿವಮೊಗ್ಗ ತಾಲೂಕು ವ್ಯವಹಾಯೋತ್ಪನ್ನ ಮಾರಾಟ ಸಹಕಾರ ಸಂಘ, ಸಾಗರ ಉಪ ವಿಭಾಗದಲ್ಲಿ ಹಂದಿಗೋಡು ಹತ್ತಿ ಕೈಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟ ಸಹಕಾರ ಸಂಘ.

ಇತರೆ ಸಹಕಾರ ಸಂಘ: ಶಿವಮೊಗ್ಗ ಉಪ ವಿಭಾಗದಲ್ಲಿ ಜಿಲ್ಲಾ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ, ಸಾಗರ ಉಪ ವಿಭಾಗದಲ್ಲಿ ಶಿಕಾರಿಪುರ ಹಿರೇಜಂಬೂರು ಹಾಲು ಉತ್ಪಾದಕರ ಸಹಕಾರ ಸಂಘಗಳು.
ಇದನ್ನೂ ಓದಿ » ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು?
Award for 16 co operative sangas
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು















