ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 23 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಜನ್ಮದಿನದ ಸಂದರ್ಭ ನೀಡುವ ಬಂಗಾರ ಪ್ರಶಸ್ತಿಗೆ (Award) ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅ.26ರಂದು ಸೊರಬದ ಬಂಗಾರಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್ ನಾಯಕ್, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್ ಅವರಿಗೆ ಈ ಬಾರಿ ಬಂಗಾರ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಮತ್ತು ತಾಮ್ರದ ಫಲಕವನ್ನು ಹೊಂದಿರಲಿದೆ ಎಂದರು.
ಉದ್ಘಾಟನೆಗೆ ಹೋಮ್ ಮಿನಿಸ್ಟರ್ Award
ಅ.26ರಂದು ಸಂಜೆ 4.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉದ್ಘಾಟಿಸಲಿದ್ದಾರೆ. ನಟ ಡಾ. ಶಿವರಾಜ್ಕುಮಾರ್, ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ, ಬಂಗಾರಪ್ಪ ಅವರ ಒಡನಾಡಿ ಬಸಪ್ಪ ಅಂಕರವಳ್ಳಿ, ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್ ನಾಯಕ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದರು.

[su_button target=”blank” style=”flat” background=”#ffffff” color=”#ffffff” size=”16″ center=”yes” icon=”icon: quote-left” icon_color=”#FF0000″][/su_button]
ಅ.26ರಂದು ಬೆಳಗ್ಗೆ 10.30ಕ್ಕೆ ಸೊರಬದ ಡಾ. ರಾಜ್ಕುಮಾರ್ ರಂಗಮಂದಿರದಲ್ಲಿ ಬಂಗಾರಪ್ಪ ಸಮಾಜವಾದಿ ಚಿಂತನೆಗಳು, ಇಂದಿನ ಪ್ರಸ್ತುತತೆ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಪ್ರೊ. ಎಲ್.ಎನ್.ಮುಕುಂದರಾಜ್, ಸಿರಾಜ್ ಅಹಮದ್ ಅವರು ವಿಚಾರ ಮಂಡಿಸಲಿದ್ದಾರೆ. ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ವೇಣುಗೋಪಾಲ್ ನಾಯಕ್, ಅಧ್ಯಕ್ಷ, ಎಸ್.ಬಂಗಾರಪ್ಪ ವಿಚಾರ ವೇದಿಕೆ
![]()
[su_button target=”blank” style=”flat” background=”#ffffff” color=”#ffffff” size=”16″ center=”yes” icon=”icon: quote-left” icon_color=”#FF0000″][/su_button]
ಅ.26ರಂದು ಸಂಜೆ 5 ಗಂಟೆಗೆ ರಂಗಮಂದಿರದಿಂದ ಬಂಗಾರಧಾಮದವರೆಗೆ ಮೆರವಣಿಗೆ ನಡೆಯಲಿದೆ. ಆ ಬಳಿಕ ಬಂಗಾರ ಪ್ರಶಸ್ತ ಪ್ರದಾನ ಸಮಾರಂಭ ನಡೆಯಲಿದೆ.
ಜಿ.ಡಿ.ಮಂಜುನಾಥ್, ಕಾಂಗ್ರೆಸ್ ನಾಯಕ
![]()
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು
ಬಂಗಾರಪ್ಪ ಅವರ ಜನ್ಮದಿನೋತ್ಸವ ಅಂಗವಾಗಿ ಅ.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಾಲೂಕಿನಿಂದ ತಲಾ ಮೂವರು ವಿಜೇತರಿಗೆ ಅ.26ರಂದು ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುತ್ತದೆ ಎಂದು ವೇಣುಗೊಪಾಲ್ ನಾಯಕ್ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ದಿಢೀರ್ ದಾಳಿ, 512 ಕಡೆ ದಂಡ, 5 ಎಫ್ಐಆರ್ ದಾಖಲು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















