ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 25 DECEMBER 2024
ಶಿವಮೊಗ್ಗ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಮೂವರಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ (Business Men) ಪ್ರಶಸ್ತಿ ನೀಡಲಾಗುತ್ತಿದೆ. ಡಿಸೆಂಬರ್ 28ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಕರ್ನಾಟಕ ವಾಣಿಜ್ಯ ಮತ್ತು ಕೈಗರಿಕಾ ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಮಾನಸ ವೆಟ್ ಫಾರ್ಮಾದ ಗಜಾನನ ಹೆಗಡೆ, ಕನ್ನಿಕಾ ಟ್ರೇಡರ್ಸ್ನ ಹೆಚ್.ಎನ್.ನಂಜುಂಡರಾಜು ಶೆಟ್ಟಿ, ಶಾಸ್ತ್ರಿ ಆಟೊಮೊಬೈಲ್ಸ್ನ ಪ್ರಶಾಂತ ಶಾಸ್ತ್ರಿ ಅವರಿಗೆ 2024ರ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ನೀಡಲಾಗುತ್ತಿದೆ. ಆಡಿಟರ್ ಎಸ್.ಬಿ.ಹನುಮಂತಪ್ಪ ಅವರಿಗೆ ವಿಶೇಷ ಪುರಸ್ಕಾರ ನೀಡಲಾಗುತ್ತಿದೆ.
ಬಿ.ಗೋಪಿನಾಥ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ
![]()

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಡಾ. ಬಿ.ವಿ.ಲಕ್ಷ್ಮಿದೇವಿ ಗೋಪಿನಾಥ್, ವಸಂತ ಕುಮಾರ್, ಅಶ್ವಥ ನಾರಾಯಣ ಶೆಟ್ಟಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ನಾಟಕೋತ್ಸವ, ಯಾವೆಲ್ಲ ನಾಟಕ ಪ್ರದರ್ಶನವಾಗಲಿದೆ?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















