SHIVAMOGGA LIVE NEWS | 1 DECEMBER 2024
ಶಿವಮೊಗ್ಗ : ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ಒಂದು ಲಕ್ಷ ಮನೆಗಳಿಗೆ ಅಯೋದ್ಯೆ, ಕಾಶಿಯ ಪ್ರಸಾದ (Prasada) ಮತ್ತು ಬೆಳ್ಳಿ ಕೋಟೆಡ್ ನಾಣ್ಯ ಹಂಚಲು ಯೋಜಿಸಲಾಗಿದೆ. ಸೋಮವಾರದಿಂದ ಪ್ರಸಾದ ಹಂಚುವ ಕಾರ್ಯ ಆರಂಭವಾಗಲಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಅವರು ಸುದ್ದಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಒಂದು ಲಕ್ಷ ಮನೆಗಳಿಗೆ ಪ್ರಸಾದ
ಈಚೆಗೆ ಶಿವಮೊಗ್ಗ ನಗರದ 1600 ಮಂದಿ ಜೊತೆಗೆ ಕೆ.ಎಸ್.ಈಶ್ವರಪ್ಪ ಕುಟುಂಬ ಸಹಿತ ಕಾಶಿ ಮತ್ತು ಅಯೋದ್ಯೆ ಪ್ರವಾಸ ಕೈಗೊಂಡಿದ್ದರು. ದೇವರ ದರ್ಶನ ಪಡೆದು ಶಿವಮೊಗ್ಗಕ್ಕೆ ಮರಳಿರುವ ಅವರು, ನಗರದ ಒಂದು ಲಕ್ಷ ಮನೆಗಳಿಗೆ ಪ್ರಸಾದ ಹಂಚಲು ನಿರ್ಧರಿಸಿದ್ದಾರೆ.
ಪ್ರವಾಸಕ್ಕೆ ಬಂದಿದ್ದ 1600 ಮಂದಿಗೆ ಡಿ.2ರಂದು ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತದೆ. ಡಿ.3ರಂದು ಶಿವಮೊಗ್ಗ ನಗರದಲ್ಲಿ ವಾರ್ಡ್ವಾರು ಪ್ರಸಾದ ವಿತರಿಸಲಾಗುತ್ತದೆ.
ಕೆ.ಇ.ಕಾಂತೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
ಇನ್ನು, ಒಂದೂವರೆ ವರ್ಷದ ಬಳಿಕ ಎರಡನೇ ಬಾರಿ ಯಾತ್ರೆ ಕೈಗೊಳ್ಳಲಾಗುತ್ತದೆ. ಆಗಲು ಸಾರ್ವಜನಿಕರು ತಮ್ಮೊಂದಿಗೆ ಯಾತ್ರೆ ಬರಬಹುದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಮಾಜಿ ಕಾರ್ಪೊರೇಟರ್ ಈ.ವಿಶ್ವಾಸ್, ಪಿ.ಹೆಚ್.ಕುಬೇರಪ್ಪ, ಚಿದಾನಂದ, ವಾಗೀಶ್ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ » ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200