ಆಯುಧ ಪೂಜೆಗೆ ಶಿವಮೊಗ್ಗದಲ್ಲಿ ಖರೀದಿ ಜೋರು, ಹೂವು, ಬಾಳೆ ಕಂದು, ಕುಂಬಳಕಾಯಿ ಬೆಲೆ ಎಷ್ಟಿತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020

ಆಯುಧ ಪೂಜೆ ಮತ್ತು ವಿಜಯದಶಮಿ ಹಿನ್ನೆಲೆ ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಜೋರಾಗಿತ್ತು. ಗಾಂಧಿ ಬಜಾರ್, ಶಿವಪ್ಪನಾಯಕ ಮಾರುಕಟ್ಟೆಯಲ್ಲಿ ಜನ ಸಂದಣಿ ಹೆಚ್ಚಾಗಿತ್ತು.

ಹೂವು, ಹಣ್ಣು ನೂರರ ಮೇಲೆ

ಆಯುಧ ಪೂಜೆ ಹಿನ್ನೆಲೆ ಹೂವು ಮತ್ತು ಹಣ್ಣು ಖರೀದಿ ಬಿರುಸಾಗಿತ್ತು. ಬೆಲೆ ದುಬಾರಿ ಅನಿಸಿದರೂ, ಖರೀದಿ ಮಾತ್ರ ಜೋರಿತ್ತು. ಚಂಡು ಹೂವು ಕೆಜಿಗೆ ನೂರೈವತ್ತು ಇನ್ನೂರು ರುಪಾಯಿ ಇತ್ತು. ಉಳಿದ ಹೂವುಗಳ ಬೆಲೆಯಲ್ಲೇನು ಬದಲಾವಣೆ ಇರಲಿಲ್ಲ. ಸಾಮಾನ್ಯ ದಿನಕ್ಕಿಂತಲೂ ಹುವಿನ ಹಾರಗಳಿಗೆ ಇವತ್ತು ಬೆಲೆ ಮತ್ತು ಬೇಡಿಕೆ ಹೆಚ್ಚಿತ್ತು. ಇನ್ನು ಹಣ್ಣುಗಳ ಬೆಲೆಯು ಗಗಮುಖಿಯಾಗಿವೆ.

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಬಾಳೆ ಕಂದು, ಬೂದುಗುಂಬಳಕ್ಕೆ ಡಿಮಾಂಡ್

ಬಾಳೆ ಕಂದು, ಬೂದುಗುಂಬಳ ಆಯುಧ ಪೂಜೆಗೆ ಅತಿ ಮುಖ್ಯ. ಇವುಗಳ ಖರೀದಿಗೂ ಜನರು ಮುಗಿಬಿದ್ದಿದ್ದರು. ಬೂದುಗುಂಬಳಕ್ಕೆ 50 ರುಪಾಯಿಯಿಂದ 200 ರೂ. ವರೆಗೂ ಇದೆ. ಗಾತ್ರದ ಆಧಾರದ ಮೇಲೆ ಬೆಲೆ ನಿಗದಿ ಮಾಡಲಾಗುತ್ತಿದೆ. ಬಾಳೆ ಕಂದು ಬೆಲೆ ಕೂಡ ಜೋಡಿಗೆ 50 ರುಪಾಯಿಂದ ಮೇಲಿತ್ತು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಮಾರುಕಟ್ಟೆಯಾದ ಸರ್ಕಲ್, ರಸ್ತೆ

ಗಾಂಧಿ ಬಜಾರ್, ಶಿವಪ್ಪನಾಯಕ ಮಾರುಕಟ್ಟೆ ಮಾತ್ರವಲ್ಲ ಶಿವಮೊಗ್ಗ ನಗರದ ಹಲವು ಕಡೆ ಹೂವು, ಹಣ್ಣು, ಬಾಳೆ ಕಂದು, ಕುಂಬಳಕಾಯಿ ಮಾರಾಟ ಬಿರುಸಾಗಿತ್ತು. ಗೋಪಿ ಸರ್ಕಲ್, ಲಕ್ಷ್ಮೀ ಟಾಕೀಸ್ ಬಳಿ, ವಿನೋಬನಗರ ಸೇರಿದಂತೆ ವಿವಿಧೆಡೆ ವ್ಯಾಪಾರಿಗಳು ಪೂಜಾ ಸಾಮಾಗ್ರಿ ಮಾರಾಟ ಮಾಡುತ್ತಿದ್ದರು.

ಬಿಡುವು ನೀಡಿದ್ದ ವರುಣ

ಕಳೆದ ಎರಡು ದಿನದಿಂದ ಮಧ್ಯಾಹ್ನವೆ ಶಿವಮೊಗ್ಗದಲ್ಲಿ ವರುಣನ ಆರ್ಭಟ ಶುರುವಾಗುತ್ತಿತ್ತು. ಆದರೆ ಇವತ್ತು ಸಂಜೆವರೆಗೂ ಮಳೆ ಬಿಡುವು ನೀಡುತ್ತು. ಹಾಗಾಗಿ ಹಬ್ಬದ ಖರೀದಿ ಬಿರುಸಾಗಿತ್ತು. ಸಂಜೆ ವೇಳೆಗೆ ಶುರುವಾದ ಮಳೆ ಜೋರಾಗಿದ್ದು, ಹೂವು, ಹಣ್ಣು, ಪೂಜಾ ಸಾಮಾಗ್ರಿ ಮಾರಾಟಗಾರರು ಸಂಕಷ್ಟಕ್ಕೀಡಾದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment