BREAKING NEWS | ಹಿಂದೂ ಹರ್ಷ ಹತ್ಯೆ ಕೇಸ್, 10ನೇ ಆರೋಪಿಯ ಜಾಮೀನು ಅರ್ಜಿ ವಜಾ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | MURDER | 30 ಮೇ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10ನೇ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣದ 10ನೇ ಆರೋಪಿಯಾಗಿರುವ ಜಾಫರ್ ಸಿದ್ದಿಕ್ಕಿ ವೈದ್ಯಕೀಯ ಕಾರಣ ನೀಡಿ ಜಾಮೀನು ನೀಡುವಂತೆ ಕೋರಿದ್ದ. ಆದರೆ, ಎನ್‌ಐಎ ಪರ ವಕೀಲ ಪಿ.ಪ್ರಸನ್ನ ಕುಮಾರ್, 10ನೇ ಆರೋಪಿಯು ಪ್ರಕರಣದ ಪ್ರಮುಖ ಆರೋಪಿಗಳಿಗೆ ಸಹಕಾರ ನೀಡಿದ್ದಾನೆ. ಜತೆಗೆ ಎನ್‌ಐಎ ಅಧಿಕಾರಿಗಳು ಇತ್ತೀಚೆಗಷ್ಟೇ 2ನೇ ಬಾರಿಗೆ ಕೆಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ, ಪುನಃ ಜೈಲಿಗೆ ಕಳುಹಿಸಿದ್ದಾರೆ.

ಪಾತ್ರದ ಬಗ್ಗೆ ಸಂಪೂರ್ಣ ತನಿಖೆ

ಮತ್ತೊಂದೆಡೆ ಪ್ರಕರಣದಲ್ಲಿ ಆರೋಪಿ ಜಾಫರ್ ಸಿದ್ದಿಕ್ಕಿಯ ಪಾತ್ರದ ಬಗ್ಗೆ ತನಿಖಾಧಿಕಾರಿಗಳು ಸಂಪೂರ್ಣ ವರದಿ ಸಲ್ಲಿಸಿಲ್ಲ. ಅಲ್ಲದೆ, ಹರ್ಷ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಲ್ಲ. ಹಿಂದೂ ಕಾರ್ಯಕರ್ತ ಎಂಬ ಕಾರಣಕ್ಕೆ ಹತ್ಯೆಗೈಯಲಾಗಿದೆ ಎಂಬುದು ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಮೂಲಕ ಪ್ರಕರಣದ ಎಲ್ಲ ಆರೋಪಿಗಳು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಯತ್ನಿಸಿದ್ದಾರೆ. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು ಎಂದು ಸರ್ಕಾರಿ ಅಭಿಯೋಜ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದರು.  ವಾದ ಅಂಗೀಕರಿಸಿದ ಕೋರ್ಟ್ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದೆ.

shimoga Nanjappa Hospital

ಇದನ್ನೂ ಓದಿ – ಮಹಾನಗರ ಪಾಲಿಕೆ ಸಿಬ್ಬಂದಿ ಮೇಲೆ ಎಸಿಬಿ ರೇಡ್, ಲಂಚದ ಹಣದ ಜೊತೆಗೆ ವಶಕ್ಕೆ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment