SHIVAMOGGA LIVE NEWS | 3 FEBRUARY 2023
SHIMOGA : ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟ್ ನಲ್ಲಿ (Balebare Ghat Road) ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಯಾವೆಲ್ಲ ಬದಲಿ ಮಾರ್ಗ?
ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು. ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು. (Balebare Ghat Road)
ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?
ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬೇಕು.
ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗು ಲಘು ಮತ್ತು ಭಾರಿ ವಾಹನಗಳಿಗು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಈ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸಬೇಕು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200