ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 MARCH 2024
SHIMOGA : ಅಕೇಶಿಯಾ ಮತ್ತು ನೀಲಗಿರಿಯನ್ನು ನಿಷೇಧಿಸುವಂತೆ, ಎಂಪಿಎಂ ಕಾರ್ಖಾನೆಗೆ ನೀಡಿದ್ದ ಅರಣ್ಯ ಭೂಮಿ ಹಿಂಪಡೆಯಬೇಕು ಎಂದು ಆಗ್ರಹಿಸಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಮಲೆನಾಡು ಪಶ್ಚಿಮಘಟ್ಟಗಳ ಶ್ರೇಣಿ ನಿತ್ಯ ಹರಿದ್ವರ್ಣದ ಕಾಡು. ಇಲ್ಲಿ ಹಲವು ನದಿಗಳು ಜನ್ಮತಾಳಿವೆ. ಜೀವ ವೈವಿಧ್ಯ ಪ್ರದೇಶ ಇದಾಗಿದ್ದು ಇಂತಹ ಪರಿಸರ ಏರುಪೇರಾದರೆ ವನ್ಯಜೀವಿಗಳು ಮಾತ್ರವಲ್ಲ, ಮಾನವ ಸಂಕುಲದ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಪ್ರದೇಶಗಳಲ್ಲಿ ಅಕೇಶಿಯಾ ಮತ್ತು ನೀಲಗಿರಿ ನೆಡುತೋಪುಗಳನ್ನು ಬೆಳೆಸುವುದರಿಂದ ಪರಿಸರಕ್ಕೆ ಧಕ್ಕೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಎಂಪಿಎಂಗೆ ನೀಡಿದ್ದ ಅರಣ್ಯ ಹಿಂಪಡೆಯಿರಿ
ಭದ್ರಾವತಿಯ ಎಂಪಿಎಂಗೆ ನೀಡಿದ್ದ 20005.42 ಹೆಕ್ಟೇರ್ ಅರಣ್ಯ ಭೂಮಿ 2020ರ ಆ.12ಕ್ಕೆ ಲೀಸ್ ಅವಧಿ ಮುಗಿದಿದೆ. ಎಂಪಿಎಂ ಕಾಗದ ಕಾರ್ಖಾನೆ 2015ಕ್ಕೆ ಬಂದ್ ಆಗಿದೆ. ಹೀಗಿದ್ದರೂ ಈ ಲೀಸ್ ಅನ್ನು ಮುಂದುವರಿಸುವ ಅಗತ್ಯ ಇಲ್ಲ. ಅರಣ್ಯ ಇಲಾಖೆಗೆ ಸೇರಿದ ಈ ಭೂಮಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗ ಟೋಲ್, ದಾಖಲೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ, ಏನದು ದಾಖಲೆ?
ಒಕ್ಕೂಟದ ಪ್ರಮುಖರಾದ ಕೆ.ಪಿ.ಶ್ರೀಪಾಲ್, ಪ್ರೊ.ರಾಜೇಂದ್ರ ಚೆನ್ನಿ, ಎಂ.ಗುರುಮೂರ್ತಿ, ಪ್ರಸನ್ನ, ಹೆಚ್.ಟಿ.ಕೃಷ್ಣಮೂರ್ತಿ, ತೀ.ನ.ಶ್ರೀನಿವಾಸ್, ರಾಜಪ್ಪ, ಮಂಜುನಾಥ್ ನವುಲೆ, ತ್ಯಾಗರಾಜ್ ಮಿಥ್ಯಾಂತ, ಸುರೇಶ್ ಅರಸಾಳು, ಬಾಲುನಾಯ್ಡು, ಚಂದ್ರಪ್ಪ, ಅನಿಲ್ ಶೆಟ್ಟರ್, ಶೆಟ್ಟರ್, ನಾಗರಾಜ್ ಚಟ್ನಳ್ಳಿ, ದೇಶಾದ್ರಿ ಹೊಸಮನೆ, ಕೃಪಾ, ಅಕ್ಷತಾ ಹುಂಚದಕಟ್ಟೆ ಇತರರಿದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






