ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ಭಾರತ್ ಬಂದ್ ಹಿನ್ನೆಲೆ ಶಿವಮೊಗ್ಗದಲ್ಲಿ ಕೆಲವು ಹೊತ್ತು ಅಂಗಡಿಗಳು ಬಂದ್ ಮಾಡಲಾಗಿತ್ತು. ರೈತರು ಪ್ರತಿಭಟನೆ ನಡೆಸಿದ ವೇಳೆ ಮಾತ್ರ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಬಂದ್ ವಾತಾವರಣವಿತ್ತು.
ರೈತರು ಮತ್ತು ವಿವಿಧ ಸಂಘಟನೆಗಳು ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಮೆರವಣಿಗೆ ನಡೆಸಿದವು. ಈ ಸಂದರ್ಭ ಗಾಂಧಿ ಬಜಾರ್ ಸಂಪೂರ್ಣ ಬಂದ್ ಮಾಡಲಾಗಿತ್ತು. ವ್ಯಾಪಾರಿಗಳು ಬಾಗಿಲು ಹಾಕಿ ಅಂಗಡಿಗಳ ಮುಂದೆ ನಿಂತಿದ್ದರು. ಮೆರವಣಿಗೆ ಗಾಂಧಿ ಬಜಾರ್’ನಿಂದ ಸಾಗುತ್ತಿದ್ದಂತೆ ಅಂಗಡಿಗಳ ಬಾಗಿಲು ತೆಗೆದು ವ್ಯಾಪಾರ ಆರಂಭಿಸಲಾಯಿತು.
ಇದನ್ನು ಓದಿ | ಭಾರತ್ ಬಂದ್ | ಗಾಂಧಿ ಬಜಾರ್ ಸೇರಿದಂತೆ ಶಿವಮೊಗ್ಗದ ಪ್ರಮುಖ ರಸ್ತೆಯಲ್ಲಿ ರೈತರ ಪ್ರತಿಭಟನಾ ಮೆರವಣಿಗೆ
ಬಿ.ಹೆಚ್.ರಸ್ತೆ, ನೆಹರೂ ರೋಡ್, ಬಾಲರಾಜ ಅರಸ್ ರಸ್ತೆಯಲ್ಲೂ ಮೆರವಣಿಗೆ ಅವಧಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು.
ಇನ್ನು, ಭಾರತ್ ಬಂದ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಬಂದೋಬಸ್ತ್ ಪರಿಶೀಲನೆ ನಡೆಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200