ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್‌ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್‌ ಜಯಂತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮರಣಶಾಸನವಾಗಿರುವ ಒಳ ಮೀಸಲಾತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಬಂಜಾರ (Banjara) ಸಮುದಾಯದ ಮುಖಂಡರು ಇವತ್ತು ಕುವೆಂಪು ರಂಗಮಂದಿರಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

Shivamogga-Live-Number-1-Website

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಎಸ್‌ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

ಕಪ್ಪು ಪಟ್ಟಿ ಧರಿಸಿ ಬಂಜಾರ ಕನ್ವೆನ್ಷನ್‌ ಹಾಲ್‌ ಮುಂಭಾಗದಿಂದ ಮೆರವಣಿಗೆ ನಡೆಸಿದ ಬಂಜಾರ ಸಂಘದ ಪ್ರಮುಖರು, ಸಿದ್ದರಾಮಯ್ಯ ಸರ್ಕಾರ, ಒಳ ಮೀಸಲಾತಿಯಲ್ಲಿನ ಅನ್ಯಾಯದ ವಿರುದ್ಧ ಘೋಷಣೆ ಕೂಗಿದರು. ಕುವೆಂಪು ರಂಗಮಂದಿರದ ಗೇಟ್‌ ಮುಂಭಾಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Banjara-Community-leaders-taken-to-custody-in-Shimoga

ರಂಗಮಂದಿರಕ್ಕೆ ಮುತ್ತಿಗೆ ಏಕೆ?

ಕುವೆಂಪು ರಂಗಮಂದಿರದಲ್ಲಿ ಸರ್ಕಾರದ ವತಿಯಿಂದ ಸಂತ ಸೇವಾಲಾಲ್‌ ಜಯಂತಿ ಆಯೋಜಿಸಲಾಗಿತ್ತು. ‘ಬಂಜಾರ ಸಮುದಾಯದ ಭವಿಷ್ಯಕ್ಕೆ ಧಕ್ಕೆ ಉಂಟು ಮಾಡುವ ಒಳ ಮೀಸಲಾತಿ ಜಾರಿಗೊಳಿಸಿ, ಸಂತ ಸೇವಾಲಾಲ್‌ ಜಯಂತಿ ನಡೆಸಲಾಗುತ್ತಿದೆ. ಸರ್ಕಾರದ ಈ ನಡೆ ಸರಿಯಲ್ಲ’ ಎಂದು ಬಂಜಾರ ಸಮುದಾಯದ ಮುಖಂಡರು ಆರೋಪಿಸಿದರು. ಬಂಜಾರ ಸಂಘದ ಜಿಲ್ಲಾಧ್ಯಕ್ಷ ಕೆ.ಬಿ.ಅಶೋಕ್‌ ನಾಯ್ಕ್‌, ಪ್ರಮುಖರಾದ ಜಗದೀಶ್‌ ನಾಯ್ಕ್‌, ಹೀರಾನಾಯ್ಕ್‌, ನಾನ್ಯನಾಯ್ಕ್‌, ಆನಂದ ನಾಯ್ಕ್‌, ನಾಗೇಶ್‌ ನಾಯ್ಕ್‌, ದೇವರಾಜ ನಾಯ್ಕ್‌, ಹರೀಶ್‌ ನಾಯ್ಕ್‌ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿತು.  ಇಲ್ಲಿದೆ ವಿಡಿಯೋ 

ಸಭೀಕರಿಲ್ಲದೆ ಜಯಂತಿ ಆಚರಣೆ

ಇನ್ನು, ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಬಂಜಾರ ಸಂಘದ ವತಿಯಿಂದ ಸಂತ ಸೇವಾಲಾಲ್‌ ಜಯಂತಿ ಆಚರಿಸಲಾಯಿತು. ರಂಗಮಂದಿರದಲ್ಲಿ ಸಭೀಕರೆ ಇರದೆ ಚೇರುಗಳು ಖಾಲಿ ಉಳಿದಿದ್ದವು. ಇದೇ ಕಾರಣಕ್ಕೆ ರಂಗಮಂದಿರದ ವೇದಿಕೆ ಮೇಲೆ ಬೆರಳೆಣಿಕೆಯಷ್ಟು ಕುರ್ಚಿಗಳನ್ನು ಹಾಕಲಾಯಿತು. ಕೆಲವೇ ಕೆಲವು ಮಂದಿ ಸಂತ ಸೇವಾಲಾಲ್‌ ಜಯಂತಿ ಅಚರಣೆಯಲ್ಲಿ ಭಾಗವಹಿಸಿದ್ದರು.

b1
ಯಾವುದೆ ಜನಾಂಗವಾದರೂ ಅದರ ದಾರ್ಶನಿಕರು ತೋರಿಸಿಕೊಟ್ಟ ದಾರಿಯಲ್ಲಿ ನಡೆಯದಿದ್ದರೆ, ಆ ಸಮಾಜ ಎಂದಿಗೂ ಮುಂದೆ ಬರುವುದಿಲ್ಲ.   ಸೇವಾಲಾಲ್ ಮದ್ಯಸೇವನೆ, ಮಾದಕ ವಸ್ತು, ಅಮಲು ಪದಾರ್ಥಗಳ ಬಳಕೆಯನ್ನು ಅಂದಿನ ಕಾಲದಲ್ಲೆ ವಿರೋಧಿಸಿದ್ದರು. ಆದರೆ ಇಂದು ನಮ್ಮ ಯಾವ ತಾಂಡಗಳು ಸಾರಾಯಿ ಮುಕ್ತವಾಗಿಲ್ಲ. ಅವರ ಮಾತನ್ನು ಪಾಲಿಸದೆ ಇರುವುದು ದುರಂತ.ಟಿ.ಗಣೇಶ್, ಮುಖ್ಯಶಿಕ್ಷಕ, ತೀರ್ಥಹಳ್ಳಿ ಮೇಳಿಗೆ ಸರ್ಕಾರಿ ಪ್ರೌಢಶಾಲೆ
b2
ಸಂತ ಸೇವಲಾಲ್‌ರು ಶಿವಮೊಗ್ಗದವರು. ಪ್ರಸ್ತುತ ಹಳ್ಳಿಗಳಲ್ಲಿ ಮದ್ಯಸೇವನೆ, ಮಾದಕ ವಸ್ತುಗಳ ಸೇವನೆ ಹೆಚ್ಚುತ್ತಿದೆ. ಈ ಎಲ್ಲವೂ ಗಳಿಂದ ಹೊರಬರಲು ಸೇವಾಲಾಲರೆ ಮಾರ್ಗವನ್ನು ಸೂಚಿಸಿದ್ದರು. ಸಮಸ್ಯೆಗಳು ನಮ್ಮ ಸಮಾಜಕ್ಕೆ ಹೊಸದಲ್ಲ.ವಿ.ಅಭಿಷೇಕ್, ಅಪರ ಜಿಲ್ಲಾಧಿಕಾರಿ
b6

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹನುಮಾನಾಯ್ಕ, ಲೋಕೋಪಯೋಗಿ ಇಲಾಖೆ ಇಇ ಉಮೇಶ್ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಇದ್ದರು.

b3
b5
b4

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 15, 2026

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment