ಶಿವಮೊಗ್ಗ: ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಮೀಸಲಾತಿಯ ಶವಯಾತ್ರೆ ನಡೆಸಿ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸವಳಂಗ ರಸ್ತೆಯಲ್ಲಿ ಮೀಸಲಾತಿಯ ಶವಯಾತ್ರೆ ನಡೆಸಲಾಯಿತು. ಶಿವಮೂರ್ತಿ ಸರ್ಕಲ್ನಲ್ಲಿ ಅಣಕು ಶವವನ್ನು ಇರಿಸಿ ಘೋಷಣೆ ಕೂಗಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶವಯಾತ್ರೆ ಮುಂದುವರೆಸಿದರು.
ಟ್ರ್ಯಾಕ್ಟರ್ ಅಡ್ಡ ನಿಲ್ಲಿಸಿ ರಸ್ತೆ ತಡೆ
ಇನ್ನು, ಶಿವಮೂರ್ತಿ ವೃತ್ತದಲ್ಲಿ ಎಲ್ಲ ಕಡೆ ಟ್ರ್ಯಾಕ್ಟರ್ಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ ರಸ್ತೆ ತಡೆ ನಡೆಸಲಾಯಿತು. ಇದರಿಂದ ಸವಳಂಗ ರಸ್ತೆ, ಕುವೆಂಪು ರಸ್ತೆ, ಜಯನಗರ ಮುಖ್ಯ ರಸ್ತೆಯಲ್ಲಿ ವಾಹನಗಳು ಸರತಿಯಲ್ಲಿ ನಿಲ್ಲುವಂತಾಯಿತು.
ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿಯ ಉದ್ದೇಶವೇ ಹಾಳಾಗಲಿದೆ. ಆದ್ದರಿಂದ ಮೀಸಲಾತಿಯ ಶವಯಾತ್ರೆ ಮಾಡುತ್ತಿದ್ದೇವೆ.
- ಕೆ.ಬಿ.ಅಶೋಕ್ ನಾಯ್ಕ್, ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ
![]()
ಸಿದ್ದಾಪುರ, ರಾಮನಕೊಪ್ಪ, ವೀರಾಪುರ, ಸಿರಿಯೂರು, ಬಿಳಕಿ, ಹೆಬ್ಬಂಡಿ ಕೋಮಾರನಹಳ್ಳಿ, ಬಾಬಳ್ಳಿ, ನಾಗತಿ ಬೆಳಗಲು, ಹೊಸಹಳ್ಳಿ, ಚಿಕ್ಕಮರಡಿ, ಕಾಟಿಕೆರೆ, ಅಬ್ಬಲಗೆರೆ, ಹುಣಸೋಡು, ಬಿಕ್ಕೋನಹಳ್ಳಿ ಬೀರನಕೆರೆ, ಮೇಲಿನ ಕುಂಚನಹಳ್ಳಿಯ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






ಇದನ್ನೂ ಓದಿ » ಶಿವಮೊಗ್ಗ – ಬೆಂಗಳೂರು ವಿಮಾನ, ಗುಡ್ ನ್ಯೂಸ್ ಕೊಟ್ಟರು ಸಂಸದ ರಾಘವೇಂದ್ರ

Banjara sanga protest in Shimoga
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






