ಶಿವಮೊಗ್ಗದಲ್ಲಿ ಮೀಸಲಾತಿಯ ಶವಯಾತ್ರೆ, ಶಿವಮೂರ್ತಿ ಸರ್ಕಲ್‌ನಲ್ಲಿ ಟ್ರ್ಯಾಕ್ಟರ್‌ ಅಡ್ಡ ನಿಲ್ಲಿಸಿ ರಸ್ತೆ ತಡೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಮೀಸಲಾತಿಯ ಶವಯಾತ್ರೆ ನಡೆಸಿ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸವಳಂಗ ರಸ್ತೆಯಲ್ಲಿ ಮೀಸಲಾತಿಯ ಶವಯಾತ್ರೆ ನಡೆಸಲಾಯಿತು. ಶಿವಮೂರ್ತಿ ಸರ್ಕಲ್‌ನಲ್ಲಿ ಅಣಕು ಶವವನ್ನು ಇರಿಸಿ ಘೋಷಣೆ ಕೂಗಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶವಯಾತ್ರೆ ಮುಂದುವರೆಸಿದರು.

ಟ್ರ್ಯಾಕ್ಟರ್‌ ಅಡ್ಡ ನಿಲ್ಲಿಸಿ ರಸ್ತೆ ತಡೆ

ಇನ್ನು, ಶಿವಮೂರ್ತಿ ವೃತ್ತದಲ್ಲಿ ಎಲ್ಲ ಕಡೆ ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ ರಸ್ತೆ ತಡೆ ನಡೆಸಲಾಯಿತು. ಇದರಿಂದ ಸವಳಂಗ ರಸ್ತೆ, ಕುವೆಂಪು ರಸ್ತೆ, ಜಯನಗರ ಮುಖ್ಯ ರಸ್ತೆಯಲ್ಲಿ ವಾಹನಗಳು ಸರತಿಯಲ್ಲಿ ನಿಲ್ಲುವಂತಾಯಿತು.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿಯ ಉದ್ದೇಶವೇ ಹಾಳಾಗಲಿದೆ. ಆದ್ದರಿಂದ ಮೀಸಲಾತಿಯ ಶವಯಾತ್ರೆ ಮಾಡುತ್ತಿದ್ದೇವೆ.

  • ಕೆ.ಬಿ.ಅಶೋಕ್‌ ನಾಯ್ಕ್‌, ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ

RED-LINE-

ಸಿದ್ದಾಪುರ, ರಾಮನಕೊಪ್ಪ, ವೀರಾಪುರ, ಸಿರಿಯೂರು, ಬಿಳಕಿ, ಹೆಬ್ಬಂಡಿ ಕೋಮಾರನಹಳ್ಳಿ, ಬಾಬಳ್ಳಿ, ನಾಗತಿ ಬೆಳಗಲು, ಹೊಸಹಳ್ಳಿ, ಚಿಕ್ಕಮರಡಿ, ಕಾಟಿಕೆರೆ, ಅಬ್ಬಲಗೆರೆ, ಹುಣಸೋಡು, ಬಿಕ್ಕೋನಹಳ್ಳಿ ಬೀರನಕೆರೆ, ಮೇಲಿನ ಕುಂಚನಹಳ್ಳಿಯ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Banjara Sanga Protest in Shimoga
ಶಿವಮೂರ್ತಿ ಸರ್ಕಲ್‌ನಲ್ಲಿ ಮೀಸಲಾತಿಯ ಅಣಕು ಶವಯಾತ್ರೆ ನಡೆಸಿದ ಬಂಜಾರ ಸಮುದಾಯ.
Banjara Sanga Protest in Shimoga
ಸವಳಂಗ ರಸ್ತೆಯಲ್ಲಿ ಅಣಕು ಶವಯಾತ್ರೆಯಲ್ಲಿ ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌.
Banjara Sanga Protest in Shimoga
ಶಿವಮೂರ್ತಿ ಸರ್ಕಲ್‌ನಲ್ಲಿ ಅಣಕು ಶವ ಇರಿಸಿ ಹೋರಾಟ.
Banjara Sanga Protest in Shimoga
ಶಿವಮೂರ್ತಿ ಸರ್ಕಲ್‌ನಲ್ಲಿ ಅಣಕು ಶವ ಇರಿಸಿ ಘೋಷಣೆ.
Banjara Sanga Protest in Shimoga
ಅಣಕು ಶವದ ಮುಂದೆ ಮಹಿಳೆಯರ ಆಕ್ರೋಶ.
Banjara Sanga Protest in Shimoga
ಶಿವಮೂರ್ತಿ ಸರ್ಕಲ್‌ನಲ್ಲಿ ರಸ್ತೆಗೆ ಟ್ರಾಕ್ಟರ್‌ ಅಡ್ಡ ನಿಲ್ಲಿಸಿ ರಸ್ತೆ ತಡೆ.

ಇದನ್ನೂ ಓದಿ » ಶಿವಮೊಗ್ಗ – ಬೆಂಗಳೂರು ವಿಮಾನ, ಗುಡ್‌ ನ್ಯೂಸ್‌ ಕೊಟ್ಟರು ಸಂಸದ ರಾಘವೇಂದ್ರ

JNNCE-Admission-Advt-scaled

Banjara sanga protest in Shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment