ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020
ಬ್ಯಾಂಕು, ಸಂಘ ಸಂಸ್ಥೆಗಳಲ್ಲಿ ಪ್ರತಿ ತಿಂಗಳು ಸಾಲದ ಕಂತು ವಸೂಲಿಯನ್ನು ತಡೆಯಬೇಕು ಅಂತಾ ಶಿವಮೊಗ್ಗ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಕರೋನ ಲೋಕ್ಡೌನ್ನಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಹಲವು ಬ್ಯಾಂಕುಗಳು, ಖಾಸಗಿ ಫೈನಾನ್ಸ್ ಮತ್ತು ಸಂಘ ಸಂಸ್ಥೆಗಳು ಸಾಲದ ಕಂತು ಕಟ್ಟುವಂತೆ ಒತ್ತಾಯಿಸುತ್ತಿವೆ. ದೂರವಾಣಿ ಮೂಲಕ ಒತ್ತಡ ಹೇರುತ್ತಿವೆ ಎಂದು ಆರೋಪಿಸಿದರು.
ಮಹಿಳೆಯರು ಹಲವು ಸಂಘಗಳಲ್ಲಿ ಸಾಲ ಪಡೆದಿದ್ದಾರೆ. ಆದರೆ ಲಾಕ್ಡೌನ್ನಿಂದಾಗಿ ದುಡಿಮೆ ಇಲ್ಲದೆ ಆ ಸಾಲ ಕಟ್ಟಲು ಅಸಾದ್ಯವಾಗಿದೆ. ಹಾಗಾಗಿ ಜನಜೀವನ ಸಹಜ ಸ್ಥಿತಿಗೆ ಬರುವವರೆಗೆ ಬ್ಯಾಂಕುಗಳು, ಖಾಸಗಿ ಫೈನಾನ್ಸ್ ಸಂಸ್ಥೆಗಳು ಸಾಲದ ಕಂತುಗಳಿಗಾಗಿ ಒತ್ತಾಯಿಸದಂತೆ ಆದೇಶಿಸಬೇಕು. ಅಲ್ಲದೆ ಸಾಲದ ಕಂತು ಪಾವತಿಗೆ ಸೆಪ್ಟೆಂಬರ್ ಕೊನೆವರೆಗೆ ಕಾಲವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ನಿತಿನ್ ರಾವ್, ರಾಜ್ಯ ಕಾರ್ಯದರ್ಶಿ ಆರ್ ಕಿರಣ್, ಜಿಲ್ಲಾ ಉಪಾಧ್ಯಕ್ಷ ಡಿ.ಆರ್.ಗಿರೀಶ್, ನಗರಾಧ್ಯಕ್ಷ ಎಚ್.ಪಿ.ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















