SHIVAMOGGA LIVE NEWS | 15 JULY 2024
SHIMOGA : ಬ್ಯಾಂಕಿಂಗ್ ಪರೀಕ್ಷೆಯಲ್ಲಿ (Banking Exam) ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಬೇಕು, ಈ ಕ್ಷೇತ್ರದಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟವು ಶಿವಮೊಗ್ಗದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಮಾಹಿತಿ ಕಾರ್ಯಕ್ರಮ ಆಯೋಜಿಸಿದೆ.
ಜು.17ರಂದು ಶಿವಮೊಗ್ಗದ ಎಟಿಎನ್ಸಿ ಕಾಲೇಜು ಚಂದನ ಸಭಾಂಗಣದಲ್ಲಿ ಒಂದು ದಿನದ ಜಿಲ್ಲಾಮಟ್ಟದ ಮಾಹಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಬ್ಯಾಂಕಿಂಗ್ ಪರೀಕ್ಷೆ ತರಬೇತುದಾರ ಮತ್ತು ಪತ್ರಿಕೆಗಳಲ್ಲಿ ಪರೀಕ್ಷೆ ಲೇಖನ ಬರಹಗಾರ ಆರ್.ಕೆ.ಬಾಲಚಂದ್ರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಆಸಕ್ತರು ಕೂಡಲೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಮಧ್ಯಾಹ್ನದ ಊಟದ ವ್ಯವಸ್ಥೆ ಇರಲಿದೆ. ಕಾರ್ಯಕ್ರಮದ ಕೊನೆಯಲ್ಲಿ ಪರೀಕ್ಷಾ ಸಿದ್ಧತೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಹರೀಶ್ ಕುಮಾರ್ 9743461647, ಮಂಜುನಾಥ್ 9742475368, ಸೌಮ್ಯಾ 9481836251 ಮೊಬೈಲ್ ನಂಬರ್ ಸಂಪರ್ಕಿಸಬಹುದು.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200