ಶಿವಮೊಗ್ಗ ಲೈವ್.ಕಾಂ | SHIMOGA | 3 ಅಕ್ಟೋಬರ್ 2019
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್(ಎಸ್ಎಸ್ಎಫ್) ಶಿವಮೊಗ್ಗ ವಿಭಾಗದ ಕ್ಯೂ ಟಿಮ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿಜಿಯ ಕನಸು ನನಸಾಗಲಿ ಎಂಬ ಘೋಷಣೆಯೊಂದಿಗೆ ಗೋಪಿ ವೃತ್ತದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಹಾಗೂ ಬೀದಿ ಭಾಷಣ ಹಮ್ಮಿಕೊಳ್ಳಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಈ ವೇಳೆ ಮಾತನಾಡಿದ ಎಸ್ಎಸ್ಎಫ್ ರಾಜ್ಯ ಉಪಾಧ್ಯಕ್ಷ ಸುಫಿಯಾನ್ ಸಖಾಫಿ, ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಗೆ ಬಲಿಯಾಗಿ ಸುಂದರ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಲೇಜು ಕ್ಯಾಂಪಸ್’ಗಳಲ್ಲಿ ಮಾದಕದ್ರವ್ಯ ಮಾಫಿಯಾಗಳು ಹೆಚ್ಚಾಗುತ್ತಿವೆ. ಇವುಗಳನ್ನು ಕೂಡಲೇ ತಡೆಗಟ್ಟಬೇಕು. ಈ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇವೆ ಎಂದರು.
ಎಸ್ಎಸ್ಎಫ್ ರಾಜ್ಯ ಸದಸ್ಯರಾದ ಅಬ್ದುಲ್ ಲತೀಫ್ ಸಅದಿ, ಜಿಲ್ಲಾ ಅಧ್ಯಕ್ಷರಾದ ಡಿ.ಎಂ.ಮದನಿ, ಶಿವಮೊಗ್ಗ ಡಿವಿಷನ್ ಅಧ್ಯಕ್ಷ ರಹೀಂ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಅಕ್ಬರ್ ಶಿವಮೊಗ್ಗ , ಅಶ್ರಫ್ ಶಿವಮೊಗ್ಗ, ಕ್ಯೂ ಟೀಂ ಡಿವಿಷನ್ ಕಂಟ್ರೋಲರ್ ಸಾದತ್ ಶಿವಮೊಗ್ಗ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]