‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 8 NOVEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಲೋಕಸಭೆ ಚುನಾವಣೆಗೆ ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ಜಿಲ್ಲಾಧ್ಯಕ್ಷ ಸುಂದರೇಶ್, ಗೀತಾ ಶಿವರಾಜ್ ಕುಮಾರ್, ಇಸ್ಮಾಯಿಲ್ ಖಾನ್ ಸೇರಿದಂತೆ ಹಲವರು ಆಕಾಂಕ್ಷಿಯಾಗಿದ್ದಾರೆ. ನಾನೂ ಕೂಡ ಆಕಾಂಕ್ಷಿ. ಸರ್ವೆ ನಡೆಸಿ ಟಿಕೆಟ್ ನೀಡಲಿ ಎಂದರು.

ಯಾರು ಜಿಲ್ಲಾ ಉಸ್ತುವಾರಿ ಸಚಿವರು?

ಇನ್ನು, ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ಆಹ್ವಾನ ಬಂದಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಯಾರು ಅನ್ನುವುದು ತಮಗೆ ಗೊತ್ತಿಲ್ಲ. ಈ ಹಿಂದೆ ಮಧು ಬಂಗಾರಪ್ಪ ಅವರು ಸಚಿವರಾಗಿದ್ದರು. ಈಗ ಯಾರಿದ್ದರೋ ಗೊತ್ತಿಲ್ಲ‌. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೇನೆ ಎಂದರು.

ಯಾರ ಬಗ್ಗೆ ಮಾತನಾಡಲು ತಮಗೆ ಭಯವಿಲ್ಲ. ಹೆದರಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅವರಂತಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಇಲ್ಲಿದೆ ಸಂವಾದದಲ್ಲಿ ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment