ಶಿವಮೊಗ್ಗ ಲೈವ್.ಕಾಂ |SHIMOGA / BHADRAVATHI NEWS | 21 NOVEMBER 2020
ಭದ್ರಾವತಿಯ ಜನ್ನಾಪುರದಲ್ಲಿ ದೇವಸ್ಥಾನದ ಸಮೀಪದಲ್ಲಿ ಮದ್ಯದ ಅಂಗಡಿ ನಡೆಸಲಾಗುತ್ತಿದೆ. ಅದನ್ನ ಬಂದ್ ಮಾಡಿಸಬೇಕು ಎಂದು ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಮಂಜುನಾಥ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ಜನ್ನಾಪುರದ ಅಂತರಘಟ್ಟಮ್ಮ ದೇವಸ್ಥಾನವಿದೆ. ಅದರ ಸಮೀಪದಲ್ಲೇ ಮದ್ಯದ ಅಂಗಡಿ ಇದೆ. ಇಲ್ಲಿ ಮದ್ಯ ಮಾರಾಟಕ್ಕಷ್ಟೆ ಅವಕಾಶವಿದೆ. ಆದರೆ ಅಲ್ಲಿಯೇ ಕುಳಿತು ಕುಡಿಯುವ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಅಬಕಾರಿ ಇಲಾಖೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹಾಗಾಗಿ ದೇವಸ್ಥಾನಕ್ಕೆ ಹೋಗುವವರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದರು.
ಸಂಘದ ಗೌರವ ಅಧ್ಯಕ್ಷ ಅನಿಲ್, ಮಹಿಳಾ ಘಟಕದ ಜಿಲ್ಲಾಧ್ಯ್ಕಷ ಹನುಮಮ್ಮ, ಕಾನೂನು ಸಲಹೆಗಾರ ನಾರಾಯಣ ಸ್ವಾಮಿ, ಮಾನವ ಹಕ್ಕುಗಳ ಹೋರಾಟ ಸಮಿತಿಯ ಬಿ.ಎನ್.ರಾಜು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200