ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 DECEMBER 2023
ಬೈಕ್ಗೆ ಕಾರು ಡಿಕ್ಕಿ, ರೈತನಿಗೆ ಗಾಯ
SHIMOGA : ಡೈರಿಗೆ ಹಾಲು ಹಾಕಲು ಬೈಕ್ನಲ್ಲಿ ತೆರಳುತ್ತಿದ್ದ ರೈತನಿಗೆ ಕಾರು ಹೊಡದಿದೆ. ಗಾಯಗೊಂಡಿರುವ ರೈತ ಚೋಡನಾಳ್ನ ಸೋಮಶೇಖರ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಪ್ಪೂರಿನಲ್ಲಿರುವ ಹಾಲಿನ ಡೈರಿಗೆ ಹಾಕು ಹಾಕಲು ಬೈಕ್ನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಘಟನೆ ಸಂಭವಿಸಿದೆ. ಸಾಗರ ಕಡೆಯಿಂದ ಬಂದ ಕಾರು ಸೋಮಶೇಖರ್ ಚಲಾಯಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಸೋಮಶೇಖರ್ ಅವರ ತಲೆಗೆ ಪೆಟ್ಟು ಬಿದ್ದಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಜಖಂ ಆಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏರಿಯಾ ಡಾಮಿನೇಷನ್ ಗಸ್ತು
SHIMOGA : ಶಿವಮೊಗ್ಗ, ಭದ್ರಾವತಿ ಮತ್ತು ಆನಂದಪುರದಲ್ಲಿ ಪೊಲೀಸರು ಏರಿಯಾ ಡಾಮಿನೇಷನ್ ವಿಶೇಷ ಗಸ್ತು ನಡೆಸಿದರು. ಈ ಸಂದರ್ಭ ಅನುಮಾನಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆದೊಯ್ದು 22 ಲಘು ಪ್ರಕರಣ ಮತ್ತು ಐಎಂವಿ ಕಾಯ್ದೆ ಅಡಿ 6 ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ, ಭದ್ರಾವತಿಯ ಸರ್.ಎಂ.ವಿ.ವೃತ್ತ, ಸೀಗೆ ಬಾಗಿ, ಹನುಮಂತನಗರ, ಉಜ್ಜನಿಪುರ, ಆನಂದಪುರದ ದಾಸಕೊಪ್ಪದಲ್ಲಿ ಪೊಲೀಸರು ಏರಿಯಾ ಡಾಮಿನೇಷನ್ ನಡೆಸಿದರು.

ಭದ್ರಾವತಿಯಲ್ಲಿ ಯಮ, ಚಿತ್ರಗಪ್ತ ಪ್ರತ್ಯಕ್ಷ
BHADRAVATHI : ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರ ನಿಯಮ ಪಾಲನೆ ಅರಿವು ಮೂಡಿಸುವ ಬೀದಿ ನಾಟಕ ಆಯೋಜಿಸಲಾಯಿತು. ಅಂಡರ್ ಬ್ರಿಡ್ಜ್ ಸರ್ಕಲ್ ಬಳಿ ಯಮ ಮತ್ತು ಚಿತ್ರಗುಪ್ತ ವೇಷಧಾರಿಗಳು ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡಿದರೆ ಯಮಲೋಕಕ್ಕೆ ದಾರಿ ಸುಲಭ ಎಂದು ಜಾಗೃತಿ ಮೂಡಿಸಿದರು. ವಿವಿಧ ಸಂಚಾರ ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಭದ್ರಾವತಿ ಡಿವೈಎಸ್ಪಿ ನಾಗರಾಜ್, ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ್, ಭದ್ರಾವತಿ ನಗರ ಇನ್ಸ್ಪೆಕ್ಟರ್ ಶ್ರೀಶೈಲ್, ಪೇಪರ್ ಟೌನ್ ಇನ್ಸ್ಪೆಕ್ಟರ್ ನಾಗಮ್ಮ ಸೇರಿದಂತೆ ವಿವಿಧ ಠಾಣೆ ಸಿಬ್ಬಂದಿ ಇದ್ದರು. ಭದ್ರಾವತಿ ಜನ್ನಾಪುರದ ಡಾ. ಬಿ.ಆರ್. ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್ ತಂಡ ಬೀದಿ ನಾಟಕ ನಡೆಸಿತು.
ಇದನ್ನೂ ಓದಿ – KSRTC ಬಸ್ನಲ್ಲಿ ಪತಿಗೆ ಬಿ.ಪಿ ಮಾತ್ರೆ ಕೊಡಲು ವ್ಯಾನಿಟಿ ಬ್ಯಾಗ್ಗೆ ಕೈ ಹಾಕಿದ ಮಹಿಳೆಗೆ ಕಾದಿತ್ತು ಆಘಾತ
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






