ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆಯಿಂದ ಗೋಪಿ ಸರ್ಕಲ್‌ವರೆಗೆ ಭಾರತ್‌ ಜೋಡೋ ಯಾತ್ರೆ

SHIVAMOGGA LIVE NEWS | 8 SEPTEMBER 2023

SHIMOGA : ದೇಶಕ್ಕೆ (BHARAT JODO) ಬೇಕಿರುವುದು ಅಭಿವೃದ್ಧಿ, ಬಡವರಿಗೆ ವಸತಿ, ಉದ್ಯೋಗ ಸೃಷ್ಟಿ. ಆದರೆ ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಬುಡ ಸಹಿತ ನಿರ್ಮೂಲನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಭಾರತ್ ಜೋಡೊ (BHARAT JODO) ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಮಟ್ಟದ ಭಾರತ್ ಜೋಡೊ ಯಾತ್ರೆ ಆಚರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನೂ ಓದಿ – ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ?

Kalleshwara-Enterprises.webp

ಬಿಜೆಪಿ ಆಡಳಿತದ ವೈಫಲ್ಯಗಳನ್ನು ದೇಶಕ್ಕೆ ಪರಿಚಯಿಸುವ ಹಾಗೂ ಬಹಿರಂಗಪಡಿಸುವ ಕಾರ್ಯ ಭಾರತ್ ಜೋಡೊ ಯಾತ್ರೆ ಮೂಲಕ ಆಗಿದೆ. ಆದ ಕಾರಣ ದೇಶದಾದ್ಯಂತ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

Bharat Jodo in Shimoga

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆ ಆರಂಭಿಸಿದಾಗ, ಬಿಜೆಪಿಯವರು ಅಪಹಾಸ್ಯ ಮಾಡಿದ್ದರು. ರಾಹುಲ್ ಗಾಂಧಿ ಅವರು ಎಲ್ಲಾ ಸವಾಲು ಎದುರಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿದರು. ಬಿಜೆಪಿಯವರಿಗೆ ಟೀಕೆ ಮಾಡುವುದು ಬಿಟ್ಟರೆ ಬೇರೆ ಗೊತ್ತಿಲ್ಲ. ಅವರಿಂದ ದೇಶದ ಅಭಿವೃದ್ಧಿ ಶೂನ್ಯ.ಹೆಚ್‌.ಎಸ್‌.ಸುಂದರೇಶ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಭಾರತ್ ಜೋಡೊ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಬಿ.ಎಚ್.ರಸ್ತೆಯ ಶಿವಪ್ಪನಾಯಕ ವೃತ್ತದಿಂದ ಗೋಪಿ ಸರ್ಕಲ್‌ವರೆಗೆ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ನಡೆಸಿದರು.

ಇದನ್ನೂ ಓದಿ – ‘ಕಾಂಗ್ರೆಸ್‌ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’

ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಪ್ರಮುಖರಾದ ಎನ್.ರಮೇಶ್, ಕಲಗೋಡು ರತ್ನಾಕರ, ಆರ್.ಎಂ.ಮಂಜುನಾಥ ಗೌಡ, ಎಸ್.ಪಿ.ಶೇಷಾದ್ರಿ, ವಿಶ್ವನಾಥ ಕಾಶಿ, ಎಸ್.ಕೆ.ಮರಿಯಪ್ಪ, ಇಸ್ಮಾಯಿಲ್ ಖಾನ್, ಚಿನ್ನಪ್ಪ, ಕೆ. ದೇವೆಂದ್ರಪ್ಪ, ಸಿ.ಎಸ್. ಚಂದ್ರಭೂಪಾಲ್, ಜಿ.ಪಲ್ಲವಿ, ಸುವರ್ಣ ನಾಗರಾಜ್, ಸೌಗಂಧಿಕ ರಘುನಾಥ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment