ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 8 SEPTEMBER 2023
SHIMOGA : ದೇಶಕ್ಕೆ (BHARAT JODO) ಬೇಕಿರುವುದು ಅಭಿವೃದ್ಧಿ, ಬಡವರಿಗೆ ವಸತಿ, ಉದ್ಯೋಗ ಸೃಷ್ಟಿ. ಆದರೆ ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಬುಡ ಸಹಿತ ನಿರ್ಮೂಲನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಭಾರತ್ ಜೋಡೊ (BHARAT JODO) ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಮಟ್ಟದ ಭಾರತ್ ಜೋಡೊ ಯಾತ್ರೆ ಆಚರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದನ್ನೂ ಓದಿ – ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್, ವೈರಲ್ ಆಯ್ತು ಫೋಟೋ, ಯಾವಾಗ ಸೇರ್ಪಡೆ?
ಬಿಜೆಪಿ ಆಡಳಿತದ ವೈಫಲ್ಯಗಳನ್ನು ದೇಶಕ್ಕೆ ಪರಿಚಯಿಸುವ ಹಾಗೂ ಬಹಿರಂಗಪಡಿಸುವ ಕಾರ್ಯ ಭಾರತ್ ಜೋಡೊ ಯಾತ್ರೆ ಮೂಲಕ ಆಗಿದೆ. ಆದ ಕಾರಣ ದೇಶದಾದ್ಯಂತ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಭಾರತ್ ಜೋಡೊ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಬಿ.ಎಚ್.ರಸ್ತೆಯ ಶಿವಪ್ಪನಾಯಕ ವೃತ್ತದಿಂದ ಗೋಪಿ ಸರ್ಕಲ್ವರೆಗೆ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ನಡೆಸಿದರು.
ಇದನ್ನೂ ಓದಿ – ‘ಕಾಂಗ್ರೆಸ್ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಪ್ರಮುಖರಾದ ಎನ್.ರಮೇಶ್, ಕಲಗೋಡು ರತ್ನಾಕರ, ಆರ್.ಎಂ.ಮಂಜುನಾಥ ಗೌಡ, ಎಸ್.ಪಿ.ಶೇಷಾದ್ರಿ, ವಿಶ್ವನಾಥ ಕಾಶಿ, ಎಸ್.ಕೆ.ಮರಿಯಪ್ಪ, ಇಸ್ಮಾಯಿಲ್ ಖಾನ್, ಚಿನ್ನಪ್ಪ, ಕೆ. ದೇವೆಂದ್ರಪ್ಪ, ಸಿ.ಎಸ್. ಚಂದ್ರಭೂಪಾಲ್, ಜಿ.ಪಲ್ಲವಿ, ಸುವರ್ಣ ನಾಗರಾಜ್, ಸೌಗಂಧಿಕ ರಘುನಾಥ್ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ






