ಶಿವಮೊಗ್ಗದಲ್ಲಿ ಇವತ್ತು ತೇಜಸ್ವಿನಿ ರಂಗಪ್ರವೇಶ, ಎಲ್ಲಿ? ಎಷ್ಟೊತ್ತಿಗೆ ಕಾರ್ಯಕ್ರಮ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದ ನಟನಂ ಬಾಲ ನಾಟ್ಯ ಕೇಂದ್ರದ ವಿದ್ಯಾರ್ಥಿನಿ ಎನ್.ಪಿ.ತೇಜಸ್ವಿನಿ ಅವರ ಭರತನಾಟ್ಯ (Bharatanatyam) ರಂಗಪ್ರವೇಶ ಕಾರ್ಯಕ್ರಮವನ್ನು ಸೆ.14ರಂದು ಸಂಜೆ 5.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಮುಖ್ಯಸ್ಥ ಡಾ. ಎಸ್.ಕೇಶವಕುಮಾರ್ ಪಿಳ್ಳೈ ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಂಗಪ್ರವೇಶ ನಮ್ಮ ಕೇಂದ್ರದ 22ನೇ ರಂಗ ಪ್ರವೇಶ ಕಾರ್ಯಕ್ರಮವಾಗಿದೆ. ತೇಜಸ್ವಿನಿ ಎರಡನೆ ತರಗತಿಯಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರೂ ಆಗಿದ್ದಾರೆ ಎಂದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಾಧುಶೆಟ್ಟಿ ಸಂಘದ ಅಧ್ಯಕ್ಷ ಎನ್.ಉಮಾಪತಿ, ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ವಿ.ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಶವಕುಮಾರ್ ಪಿಳ್ಳೈ ಉಪಸ್ಥಿತರಿರಲಿದ್ದಾರೆ ಎಂದರು.

Natanam-Balya-Natya-kendra-tejaswini-Bharatanatyam.

ವಿ.ರಾಜು ಮಾತನಾಡಿ, ತೇಜಸ್ವಿನಿ ಮೂಲತಃ ಜಿಲ್ಲೆಯವರೆ ಆಗಿದ್ದಾರೆ. ಎನ್.ಪ್ರಶಾಂತ್, ಹರಿಣಾಕ್ಷಿ ಅವರ ಪುತ್ರಿ. ತೇಜಸ್ವಿನಿ ಸಾಧುಶೆಟ್ಟಿ ಸಮಾಜದಿಂದ ರಂಗಪ್ರವೇಶ ಮಾಡುತ್ತಿರುವ ಮೊದಲ ಹೆಣ್ಣುಮಗು ಎಂದರು.

ಸುದ್ದಿಗೋಷ್ಠಿಯಲ್ಲಿ ಎನ್.ಪಿ.ತೇಜಸ್ವಿನಿ, ಹರಿಣಾಕ್ಷಿ, ರೇಖಾ ವಿ.ರಾಜು, ಕುಮಾರಸ್ವಾಮಿ ಇದ್ದರು.

JNNCE-Admission-Advt-scaled

ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿಬಿಟ್ಟೆ’, ಸಂಸದ ರಾಘವೇಂದ್ರ ಬೇಸರ

Prashanth-Loan-Advertisement.

Bharatanatyam rangapravesh in shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment