SHIMOGA : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸೋಣ ಎಂಬ ಸಂದೇಶ ಸಾರುವ ಸೌಹಾರ್ದ ಹಬ್ಬವನ್ನು ಶಿವಮೊಗ್ಗದಲ್ಲಿ ಆಚರಿಸಲಾಯಿತು. ಈ ಹಿನ್ನೆಲೆ ನಗರದಲ್ಲಿ 2 ಸಾವಿರ ಅಡಿ ಉದ್ದದ ಬಹೃತ್ ತ್ರಿವರ್ಣ (Tricolor) ಹಿಡಿದು ನಾಗರಿಕರು ಮೆರವಣಿಗೆ ಮಾಡಿದರು.
ಶಿವಮೊಗ್ಗ ಮೆಡಿಕಲ್ ಕಾಲೇಜು ಮುಂಭಾಗ ಸೌಹಾರ್ದ ಹಬ್ಬಕ್ಕೆ ಚಾಲನೆ ನೀಡಲಾಯಿತು. ಅಲ್ಲಿಂದ 2 ಸಾವಿರ ಅಡಿ ಉದ್ದದ ತ್ರಿವರ್ಣ ಹಿಡಿದು ಜನರು ಮೆರವಣಿಗೆ ನಡೆಸಿದರು. ಅಶೋಕ ಸರ್ಕಲ್, ಬಿ.ಹೆಚ್.ರಸ್ತೆ, ಅಮೀರ್ ಅಹಮದ್ ಸರ್ಕಲ್, ಶಿವಪ್ಪನಾಯಕ ಪ್ರತಿಮೆ ಮೂಲಕ ಸೈನ್ಸ್ ಮೈದಾನ ತಲುಪಿತು.
ವಿವಿಧ ಸಂಘಟನೆಗಳು, ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಶಾಂತಿ, ಸೌಹಾರ್ದತೆ ಪರ ಘೋಷಣೆ ಕೂಗಿದರು.
ಮಠಾಧೀಶರು, ಮೌಲ್ವಿಗಳು ಮತ್ತು ಪಾದ್ರಿಗಳು ಕೈ ಕೈ ಹಿಡಿದು ಹೆಜ್ಜೆ ಹಾಕಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಭಾಗಹಿಸಿದ್ದರು. ಸೈನ್ಸ್ ಮೈದಾನದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.
ಧರ್ಮ ಅನ್ನುವುದು ನಡವಳಿಕೆಯಲ್ಲಿ ಇರಬೇಕು. ಇಡೀ ಜಗತ್ತು ಒಂದು ಮನೆ ಇದ್ದಂತೆ. ಎಲ್ಲರು ಒಂದು ಕುಟುಂಬದ ಹಾಗೆ ಇರಬೇಕು. ಅಕ್ಕಪಕ್ಕದವರ ಕುರಿತು ಅನುಮಾನ ಮೂಡದ ಹಾಗಿರಬೇಕು. ಉತ್ಸವ, ಹಬ್ಬಗಳು ಮನುಷ್ಯ ಜಂಜಡ ದೂರ ಮಾಡಿ ಉತ್ಸಾಹ ತುಂಬಲು ಬರುತ್ತವೆ. ಹಬ್ಬಗಳನ್ನು ಎಲ್ಲರು ಕೂಡಿ ಆನಂದಿಸುವಂತಾಗಬೇಕು.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬೆಕ್ಕಿನ ಕಲ್ಮಠ
ವೈವಿಧ್ಯತೆ ನಮ್ಮ ಜೀವನದ ಜೀವನಾಡಿ. ಇದನ್ನು ತೆಗೆದು ಹಾಕಲು ಯತ್ನಿಸುವುದು ಸರಿಯಲ್ಲ. ಧರ್ಮಗಳು ಒಂದೇ ದೇವರನ್ನು ಸೇರಲು ಇರುವ ಅನ್ಯಾನ್ಯ ಮಾರ್ಗ. ಆದ್ರೆ ಇದೆ ಧರ್ಮವನ್ನು ಕೆಟ್ಟ ಉದ್ದೇಶಕ್ಕೆ ಬಳಸಬಾರದು. ಧರ್ಮಾಂಧತೆ ತೊಲಗಿಸಲು ವಿದ್ಯಾಭ್ಯಾಸ ಮುಖ್ಯ. ಎಲ್ಲ ಧರ್ಮದ ಅರಿವು ಎಲ್ಲರಲ್ಲಿ ಇದ್ದಲ್ಲಿ ಸಮಾನತೆಯಿಂದ ಬಾಳಲು ಸಾದ್ಯ. ವಾಟ್ಸಪ್ನ್ನೇ ಯುನಿವರ್ಸಿಟಿ ಎಂದು ಭಾವಿಸಿದವರು ಇದ್ದಾರೆ. ತಪ್ಪು ಸಂದೇಶವನ್ನು ವೈರಲ್ ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರ ವಹಿಸಬೇಕು.ಫಾ. ಸುನಿಲ್ ರೋಡ್ರಿಗಸ್, ಕ್ರೈಸ್ತ ಧರ್ಮಗುರು
ಚಂದ್ರಯಾನ ಯಶಸ್ಸಿಗೆ ಸರ್ವ ಧರ್ಮದ ವಿಜ್ಞಾನಿಗಳು ಕೊಡುಗೆ ನೀಡಿದ್ದಾರೆ. ಇನ್ಮುಂದೆ ಚಂದ್ರನಲ್ಲಿ ಗಣಪತಿ, ಈದ್ ಹಬ್ಬ ಆಚರಣೆ ಮಾಡುವಂತಾಗಬೇಕು. ಆಯಾ ಧರ್ಮದ ಕುರಿತು ಸಂದೇಶ ನೀಡಬೇಕಾದ್ದು ಧರ್ಮ ಗುರುಗಳು. ರಾಜಕಾರಣಿಗಳು ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸಬೇಕು. ಅವರು ಧಾರ್ಮಿಕ ವಿಚಾರಗಳಿಗೆ ಬರಬಾರದು.ಲತೀಫ್ ಷರೀಫ್, ಇಸ್ಲಾಂ ಧರ್ಮ ಗುರು
ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ
HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ
✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ