SHIVAMOGGA LIVE NEWS | 14 SEPTEMBER 2023
SHIMOGA : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸೋಣ ಎಂಬ ಸಂದೇಶ ಸಾರುವ ಸೌಹಾರ್ದ ಹಬ್ಬವನ್ನು ಶಿವಮೊಗ್ಗದಲ್ಲಿ ಆಚರಿಸಲಾಯಿತು. ಈ ಹಿನ್ನೆಲೆ ನಗರದಲ್ಲಿ 2 ಸಾವಿರ ಅಡಿ ಉದ್ದದ ಬಹೃತ್ ತ್ರಿವರ್ಣ (Tricolor) ಹಿಡಿದು ನಾಗರಿಕರು ಮೆರವಣಿಗೆ ಮಾಡಿದರು.
ಶಿವಮೊಗ್ಗ ಮೆಡಿಕಲ್ ಕಾಲೇಜು ಮುಂಭಾಗ ಸೌಹಾರ್ದ ಹಬ್ಬಕ್ಕೆ ಚಾಲನೆ ನೀಡಲಾಯಿತು. ಅಲ್ಲಿಂದ 2 ಸಾವಿರ ಅಡಿ ಉದ್ದದ ತ್ರಿವರ್ಣ ಹಿಡಿದು ಜನರು ಮೆರವಣಿಗೆ ನಡೆಸಿದರು. ಅಶೋಕ ಸರ್ಕಲ್, ಬಿ.ಹೆಚ್.ರಸ್ತೆ, ಅಮೀರ್ ಅಹಮದ್ ಸರ್ಕಲ್, ಶಿವಪ್ಪನಾಯಕ ಪ್ರತಿಮೆ ಮೂಲಕ ಸೈನ್ಸ್ ಮೈದಾನ ತಲುಪಿತು.
ವಿವಿಧ ಸಂಘಟನೆಗಳು, ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಶಾಂತಿ, ಸೌಹಾರ್ದತೆ ಪರ ಘೋಷಣೆ ಕೂಗಿದರು.
ಮಠಾಧೀಶರು, ಮೌಲ್ವಿಗಳು ಮತ್ತು ಪಾದ್ರಿಗಳು ಕೈ ಕೈ ಹಿಡಿದು ಹೆಜ್ಜೆ ಹಾಕಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಭಾಗಹಿಸಿದ್ದರು. ಸೈನ್ಸ್ ಮೈದಾನದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.
ಇದನ್ನೂ ಓದಿ – ಗಣೇಶ ಹಬ್ಬ, ಈದ್ ಮಿಲಾದ್, ಶಿವಮೊಗ್ಗದಲ್ಲಿ ಮಿನಿಸ್ಟರ್ ನೇತೃತ್ವದಲ್ಲಿ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು?
ಯಾರೆಲ್ಲ ಏನೇನು ಹೇಳಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200