ಮ್ಯಾರಥಾನ್‌ ವೇಳೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನಿಗೆ ಬೈಕ್‌ ಡಿಕ್ಕಿ

ಶಿವಮೊಗ್ಗ: ನಮೋ ಯುವ ರನ್ ಮ್ಯಾರಥಾನ್‌ನಲ್ಲಿ (Marathon) ಪಾಲ್ಗೊಂಡು ವಾಪಸಾಗುತ್ತಿದ್ದ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಚಾಲಕ ಎಸ್.ದತ್ತಾತ್ರಿ ಅವರು ಬಿ.ಹೆಚ್.ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾದ್ದರಿಂದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಲಿಸಲಾಯಿತು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ವೈದ್ಯಕೀಯ ತಂಡ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಗೆ ನಾಲ್ಕು ಹೊಲಿಗೆ ಹಾಕಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್‌. ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್, ಜಿಲ್ಲಾಧ್ಯಕ್ಷ ಎನ್‌. ಕೆ.ಜಗದೀಶ್ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ದತ್ತಾತ್ರಿ ಅವರ ಆರೋಗ್ಯ ವಿಚಾರಿಸಿದರು.

S-dattatri-BJP-Leader.

Nanjappa Hospital Advertisement

ಇದನ್ನೂ ಓದಿ » ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

JNNCE-Admission-Advt-scaled

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment