ಎಚ್ಚೆತ್ತುಕೊಳ್ಳದಿದ್ದರೆ ಗಾಡಿಕೊಪ್ಪದಲ್ಲಿ ಮತ್ತಷ್ಟು ಅವಘಡ ನಿಶ್ಚಿತ, ಮೈ ಜುಮ್‌ ಅನಿಸುತ್ತೆ ಸಿಸಿಟಿವಿ ದೃಶ್ಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 7 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಗಾಡಿಕೊಪ್ಪದಲ್ಲಿ ಜ.2ರಂದು ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯ ಈಗ ವೈರಲ್‌ ಆಗಿದೆ. ಘಟನೆಯಲ್ಲಿ ಶಾಲೆ ವಿದ್ಯಾರ್ಥಿನಿ ಮತ್ತು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಲೆ ಎಚ್ಚೆತ್ತುಕೊಳ್ಳದೆ ಇದ್ದರೆ ಇಲ್ಲಿ ಇನ್ನಷ್ಟು ಅಪಘಾತ ಸಂಭವಿಸುವ ಸಾಧ್ಯತೆ ಇದೆ.  

ಹೇಗಾಯ್ತು ಅಪಘಾತ?

ಆಯನೂರು ಕಡೆಯಿಂದ ವೇಗವಾಗಿ ಬಂದ ಅಪಾಚೆ ಬೈಕ್‌, ಮೊದಲು 12 ವರ್ಷದ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಬಳಿಕ ರಸ್ತೆಯ ಎಡ ಭಾಗದಲ್ಲಿ ಅಂಗಡಿಯೊಂದರ ಮುಂದೆ ನಿಂತಿದ್ದ ಶಿವರಾಜ್‌ (45) ಎಂಬುವವರಿಗೆ ಡಿಕ್ಕಿಯಾಗಿದೆ. ಪಕ್ಕದಲ್ಲಿ ನಿಂತಿದ್ದ ಎರಡು ಬೈಕುಗಳಿಗು ಅಪ್ಪಳಿಸಿತು. ಇಷ್ಟಾದರು ಬೈಕ್‌ ವೇಗ ತಗ್ಗಲಿಲ್ಲ. ಫುಟ್‌ ಪಾತ್‌ ಮೇಲೆ ಹಾರಿದ ಬೈಕ್‌ ಅಂಗಡಿಯೊಂದರ ಪಕ್ಕದಲ್ಲಿದ್ದ ಕಟ್ಟೆಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾಂಕ್ರಿಟ್‌ ಕಟ್ಟೆ ಒಡೆದು ಹೋಗಿದೆ.

ಸದ್ಯ ಗಂಭೀರ ಗಾಯಗೊಂಡಿರುವ ಬಾಲಕಿ ಮತ್ತು ಶಿವರಾಜ್‌ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಬಳಿಕ ಸ್ಥಳೀಯರು ತೀವ್ರ ಆಕ್ರೋಸ ವ್ಯಕ್ತಪಡಿಸಿದ್ದರಿಂದ ಗಾಡಿಕೊಪ್ಪದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಎರಡು ದಿನ ಗಾಡಿಕೊಪ್ಪ ಸರ್ಕಲ್‌ನಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

gadikoppa

ಜನ ಸಂದಣಿ ಹೆಚ್ಚಿರುವ ಪ್ರದೇಶ

ಗಾಡಿಕೊಪ್ಪದ ಎರಡು ಬದಿಯಲ್ಲು ವಿವಿಧ ಅಂಗಡಿಗಳು, ಹೊಟೇಲ್‌, ಕಚೇರಿಗಳಿವೆ. ಆದ್ದರಿಂದ ಸದಾ ಜನ ಸಂಚಾರ ಇರುತ್ತದೆ. ರಸ್ತೆಗೆ ಹೊಂದಿಕೊಂಡು ಸರ್ಕಾರಿ ಶಾಲೆ ಇದೆ. ಅಂಗನವಾಡಿಯಿಂದ ಎಸ್ಸೆಸ್ಸೆಲ್ಸಿವರೆಗೆ ತರಗತಿಗಳು ನಡೆಯುತ್ತವೆ. ಸುತ್ತಮುತ್ತಲಿಂದ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಈ ಶಾಲೆಗೆ ಬರುತ್ತಾರೆ.

gadikoppa school

ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಅಪಘಾತ

‘ಆಲ್ಕೊಳ ಸರ್ಕಲ್‌ನಿಂದ ಗಾಡಿಕೊಪ್ಪ ಕಡೆಗೆ ತೆರಳುವ ವಾಹನಗಳು ವೇಗ ಕಡಿಮೆ ಇರುತ್ತದೆ. ಆದರೆ ಸಾಗರ ಕಡೆಯಿಂದ ಬರುವ ಬಹುತೇಕ ವಾಹನಗಳು ಅತಿ ವೇಗದಲ್ಲಿರುತ್ತವೆ. ಆಯನೂರಿನಿಂದ ಇಲ್ಲಿಯ ತನಕ ಎಲ್ಲಿಯು ಇಷ್ಟು ಜನ ಸಂದಣಿ ಇಲ್ಲ. ಹಾಗಾಗಿ ವಾಹನ ಚಾಲಕರು ಅತಿ ವೇಗವಾಗಿಯೇ ಗಾಡಿಕೊಪ್ಪಕ್ಕೆ ಬರುತ್ತಾರೆ. ಇದೇ ಕಾರಣಕ್ಕೆ ಅಪಘಾತಗಳು ಹೆಚ್ಚಾಗುತ್ತಿವೆ. ರಸ್ತೆ ಪಕ್ಕದ ಅಂಗಡಿಯಲ್ಲಿ ಕುಳಿತು ವ್ಯಾಪಾರ ಮಾಡಲು ನಮಗೆ ಆತಂಕವಾಗುತ್ತಿದೆ ಅನ್ನುತ್ತಾರೆ ಅಕ್ಕಿ ವ್ಯಾಪಾರಿ ಲಕ್ಷ್ಮಣ.

Gadikoppa

‘ಇಲ್ಲಿ ಹಂಪ್‌ ಹಾಕಿ ಎಂದು ಹಲವು ವರ್ಷದಿಂದ ಬೇಡಿಕೆ ಇಟ್ಟಿದ್ದೇವೆ. ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮನವಿ ಸಲ್ಲಿಸಿದ್ದೆವು. ಆದರೆ ಹೆದ್ದಾರಿ ಆಗಿರುವುದರಿಂದ ಹಂಪ್‌ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ. ಈ ಹಿಂದೆ ಇಲ್ಲಿ ಬ್ಯಾರಿಕೇಡ್‌ಗಳನ್ನು ಇರಿಸಿದ್ದರು. ಪ್ರಧಾನಿ ಮೋದಿ ಕಾರ್ಯಕ್ರಮ ಇದೆ ಎಂದು ಬ್ಯಾರಿಕೇಡ್‌ಗಳನ್ನು ಕೊಂಡೊಯ್ದಿದ್ದರು. ಈಗ ಅಪಘಾತದ ಬಳಿಕ ಬ್ಯಾರಿಕೇಡ್‌ ತಂದಿಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಸ್ಥಳೀಯರಾದ ದತ್ತಾತ್ರಿ.

gadikoppa

ಗಾಡಿಕೊಪ್ಪದಲ್ಲಿ ಶಾಲೆ ಅವಧಿಗೆ ಸರಿಯಾಗಿ ಬೆಳಗ್ಗೆ ಮತ್ತು ಸಂಜೆ ವೇಳೆಗೆ ಸಂಚಾರ ಪೊಲೀಸರನ್ನು ನಿಯೋಜನೆ ಮಾಡಬೇಕು, ವಾಹನಗಳ ವೇಗ ಸಂಪೂರ್ಣ ತಗ್ಗುವಂತೆ ಬ್ಯಾರಿಕೇಡ್‌ ಹಾಕಬೇಕು, ಬ್ಯಾರಿಕೇಡ್‌ಗಳನ್ನು ಶಾಶ್ವತವಾಗಿ ಇಲ್ಲಿ ಉಳಿಸಬೇಕು, ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವವರಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ. ಸದ್ಯ ಗಾಡಿಕೊಪ್ಪ ಸರ್ಕಲ್‌ನಲ್ಲಿ ಜನರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ರಸ್ತೆಗಿಳಿಯುವಂತಾಗಿದೆ. ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ವಾಹನಗಳ ವೇಗ ತಗ್ಗಿಸಲು ಕ್ರಮ ವಹಿಸಿದರೆ ಜನರು ನೆಮ್ಮದಿಯಿಂದ ಓಡಾಡುವಂತಾಗುತ್ತದೆ.

ಇದನ್ನೂ ಓದಿ – ಶಿವಮೊಗ್ಗದ ರಸ್ತೆಯಲ್ಲಿ ವೀಲಿಂಗ್‌, ಮತ್ತೊಂದು ವಿಡಿಯೋ ವೈರಲ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment