ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 7 JULY 2023
SHIMOGA : ದ್ವಿಚಕ್ರ ವಾಹನ ಮತ್ತು ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಸವಾರನ (Bike Rider) ಎರಡು ಕಾಲಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರ ನೆರವಿನೊಂದಿಗೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹೊನ್ನಾಳಿ ಫ್ಲೈಓವರ್ ಕೆಳಗೆ ಘಟನೆ ಸಂಭವಿಸಿದೆ. ಕೆಎಸ್ಆರ್ಟಿಸ್ ಬಸ್ ಅಡಿಗೆ ಬೈಕ್ ಸಿಲುಸಿತ್ತು. ಸವಾರ ಖಲೀದ್ ಪಾಷಾ ಅವರ ಕಾಲಿನ ಮೇಲೆ ಬಸ್ಸಿನ ಚಕ್ರಗಳು ಹತ್ತಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ – ಕೂಡ್ಲಿಗೆರೆಯಲ್ಲಿ ವ್ಯಕ್ತಿ ಮೇಲೆ ಹರಿದ ಖಾಸಗಿ ಶಾಲೆ ಬಸ್
ಸ್ಥಳಕ್ಕೆ ಆಗಮಿಸಿದ 108 ಆಂಬುಲೆನ್ಸ್ ವೈದ್ಯಕೀಯ ತಂತ್ರಜ್ಞ ಉಪೇಂದ್ರ, ಚಾಲಕ ಪುಟ್ಟಪ್ಪ ಗಾಯಾಳುವನ್ನು (Bike Rider) ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















