SHIVAMOGGA LIVE NEWS | THEFT | 27 ಮೇ 2022
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣ ಹೆಚ್ಚಳವಾಗುತ್ತಿದೆ. ಬಾಲರಾಜ ಅರಸ್ ರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ಕಳುವಾಗಿದೆ.
ಸಯ್ಯದ್ ಮುಸಾವೀರ್ ಪಾಷಾ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಇಲ್ಲಿನ ಉಡುಪಿ ಹೊಟೇಲ್ ಪಕ್ಕದಲ್ಲಿರುವ ಮನೆ ಬಳಿ ರಾತ್ರಿ ಬೈಕ್ ನಿಲ್ಲಿಸಿದ್ದರು.
ಬೆಳಗ್ಗೆ ಎದ್ದು ನೋಡಿದಾಗ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಗುಂಡಪ್ಪ ಶೆಡ್’ನಲ್ಲಿ ರಾತ್ರೋರಾತ್ರಿ ಬೈಕ್ ನಾಪತ್ತೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.