ಶಿವಮೊಗ್ಗ LIVE
SHIVAMOGGA LIVE NEWS | 25 ಮಾರ್ಚ್ 2022
ಇಪ್ಪತ್ತು ನಿಮಿಷದ ಅಂತರದಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಬಾಲರಾಜ ಅರಸ್ ರಸ್ತೆಯ ಉಪ್ಪಾರರ ಹಾಸ್ಟೆಲ್ ಬಳಿ ಘಟನೆ ಸಂಭವಿಸಿದೆ.

ಅಡುಗೆ ಕೆಲಸ ಮಾಡುತ್ತಿರುವ ಆರ್.ರಂಗನಾಥ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಹಾಡೋನಹಳ್ಳಿಯಲ್ಲಿ ಅಡುಗೆ ಕೆಲಸ ಇದ್ದಿದ್ದರಿಂದ ರಂಗನಾಥ್ ಅವರು ಉಪ್ಪಾರರ ಹಾಸ್ಟೆಲ್’ನಲ್ಲಿ ಕೆಲಸ ಮಾಡುವ ರಮೇಶ್ ಎಂಬುವವರ ಜೊತೆಗೆ ತೆರಳಿದ್ದರು.
ಮಾರ್ಚ್ 23ರ ಸಂಜೆ ಉಪ್ಪಾರರ ಹಾಸ್ಟೆಲ್ ಬಳಿ ಬಂದು ರಂಗನಾಥ್ ಅವರು ಬೈಕ್ ನಿಲ್ಲಿಸಿದ್ದಾರೆ. ಹಾಸ್ಟೆಲ್ ಒಳಗೆ ಕೊಠಡಿಗೆ ತೆರಳಿದ್ದಾರೆ. ಮುಖ, ಕೈ ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. 20 ನಿಮಿಷದಲ್ಲಿ ಬೈಕ್ ಕಳ್ಳತನವಾಗಿದೆ.
ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು






